ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಕಟೀಲು ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಟೀಲಿನಲ್ಲಿ ನಡೆದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ವಿಶೇಷ ಆಕರ್ಷಣೆಯಾಗಿತ್ತು. ದೇವಾಲಯದ ಆನೆ ಮಹಾಲಕ್ಷ್ಮಿಯು ರಾಷ್ಟ್ರೀಯ ತ್ರಿವರ್ಣವನ್ನು ಹಿಡಿದುಕೊಂಡು ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸುತ್ತಿರುವುದು ಕಂಡುಬಂದಿತು. ಸ್ವಾತಂತ್ರ್ಯೋತ್ಸವದ ಅಂಗವಾಗಿ ದುರ್ಗಾಪರಮೇಶ್ವರಿ ದೇವಿಯನ್ನು ತ್ರಿವರ್ಣ ಪುಷ್ಪಗಳಿಂದ ಅಲಂಕರಿಸಿ ಭಕ್ತರ ಮನಸೂರೆಗೊಂಡರು.


