Saturday, March 14, 2026
Flats for sale
Homeಜಿಲ್ಲೆಮಂಗಳೂರು : ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ;...

ಮಂಗಳೂರು : ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ; ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಕೆ ಪೂಜಾರಿ,ಕೋಶಧಿಕಾರಿಯಾಗಿ ವಿಜಯ್ ಕೋಟ್ಯಾನ್ ಅವಿರೋಧವಾಗಿ ಆಯ್ಕೆ‌.

ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ಸಾಲಿನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ ಯಾಗಿದ್ದಾರೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧ ವಾಗಿ ಆಯ್ಕೆ ಯಾಗಿದ್ದಾರೆ.

ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂಗ ಣದಲ್ಲಿ ಭಾನುವಾರ ನಡೆದ ಚುನಾವ ಣೆಯಲ್ಲಿ ಒಟ್ಟು 352 ,ಮಂದಿ ಮತದಾರರಲ್ಲಿ 331 ಮಂದಿ ಮತಚಲಾಯಿಸಿದ್ದರು‌.ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರತಿಸ್ಪರ್ಧಿ ಶ್ರವಣ ಕುಮಾರ್ ಪರಾಭವ ಗೊಂಡಿದ್ದಾರೆ.

ಉಪಾಧ್ಯಕ್ಷ ರಾಗಿ ಮುಹಮ್ಮದ್ ಆರಿಫ್ ಪಡುಬಿದ್ರೆ, ವಿಲ್ಫೆಡ್ ಡಿ ಸೋಜ,ರಾಜೇಶ್ ಶೆಟ್ಟಿ ಚುನಾವಣೆಯಲ್ಲಿ ಆಯ್ಕೆಯಾ ಗಿದ್ದಾರೆ.ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಐ.ಬಿ.ಸಂದೀಪ್ ಕುಮಾರ್, ಗಂಗಾಧರ ಕಲ್ಲಪಳ್ಳಿ ಪರಾಭವಗೊಂಡಿದ್ದಾರೆ. ಕಾರ್ಯದರ್ಶಿ ಯಾಗಿ ಸಿದ್ದಿಕ್ ನೀರಾಜೆ, ಸುರೇಶ್ ಡಿ ಪಳ್ಳಿ,ಸತೀಶ್ ಇರಾ ಆಯ್ಕೆ ಯಾಗಿದ್ದಾರೆ.ರಾಜೇಶ್ ದಡ್ಡಂಗಡಿ ಪರಾಭವ ಗೊಂಡಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಿಗಾಗಿ ನಡೆದ ಚುನಾವಣೆಯಲ್ಲಿ ಅಶೋಕ್ ಶೆಟ್ಟಿ ಬಿ.ಎನ್,ಸಂದೇಶ್ ಜಾರ,ಸಂದೀಪ್ ಕುಮಾರ್, ಲಕ್ಷ್ಮೀ ನಾರಾಯಣ, ಹರೀಶ್ ಮೋಟುಕಾನ,ದಿವಾಕರ ಪದ್ಮುಂಜ,ಕಿರಣ್ ಸಿರ್ಸಿಕರ,ಅಭಿಷೇಕ್ ಎಚ್.ಎಸ್,ಜಯಶ್ರೀ, ಭುವನೇಶ್ವರ,ಸಂದೀಪ್ ವಾಗ್ಲೆ,ಹರೀಶ್ ಕೆ ಆದೂರು,ಗಿರೀಶ್ ಅಡ್ಪಂಗಾಯ ,ಸಂದೀಪ್ ಸಾಲ್ಯಾನ್, ಆರಿಫ್ ಕಲ್ಕಟ್ಟ ಆಯ್ಕೆಯಾ ಗಿದ್ದಾರೆ.
ಇದೇ ಸಂದರ್ಭದಲ್ಲಿ ನಡೆದ ಕರ್ನಾಟಕ ರಾಜ್ಯ ಜಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿಯ ಒಂದು ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀನಿ ವಾಸ ನಾಯಕ್ ಇಂದಾಜೆ ಆಯ್ಕೆಯಾ ಗಿದ್ದಾರೆ. ಪ್ರತಿಸ್ಪರ್ಧಿ ಅನ್ಸಾರ್ ಇನೋಳಿ ಪರಾಭವ ಗೊಂಡಿದ್ದಾರೆ.

ದಕ್ಷಿಣ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular