Thursday, April 30, 2026
Flats for sale
Homeಜಿಲ್ಲೆಮಂಗಳೂರು : ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಬಸ್ ಪಲ್ಟಿ,20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ.

ಮಂಗಳೂರು : ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಬಸ್ ಪಲ್ಟಿ,20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ.

ಮಂಗಳೂರು : ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಮಗುಚಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಣ್ಣ ಪುಟ್ಟ ಗಾಯಾಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ದೊರೆತಿದೆ .

ಪ್ರಯಾಣಿಕರು ಆಂಧ್ರ ಪ್ರದೇಶ ಮೂಲದವರಾಗಿದ್ದು ಧರ್ಮಸ್ಥಳದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.ಸ್ಥಳೀಯರ ಸಹಾಯದಿಂದ ರಕ್ಷಣೆ ಕಾರ್ಯಾಚರಣೆ ನಡೆದಿದ್ದು ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular