ಮಂಗಳೂರು ; ಬೊಲೆರೊ ವಾಹನ ಢಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ದೇರಳಕಟ್ಟೆಯಲ್ಲಿ ನಡೆದಿದೆ.
ಕೇರಳ ಮೂಲದ ಪ್ರಸ್ತುತ ದೇರಳಕಟ್ಟೆಯಲ್ಲಿ ವಾಸವಿರುವ ಶ್ರೀ ಕಮಲ (58) ಮೃತ ಮಹಿಳೆ.
ಶ್ರೀ ಕಮಲ ಅವರ ಪುತ್ರಿ ಮೀರಾ ಎಂಬವರು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದಾರೆ. ತಾಯಿ ಮತ್ತು ಪುತ್ರಿ ದೇರಳಕಟ್ಟೆಯಲ್ಲಿ ಅಪಾರ್ಟ್ ಮೆಂಟ್ವೊಂದರಲ್ಲಿ ವಾಸವಾಗಿದ್ದರು. ಶ್ರೀ ಕಮಲ ಅವರು ಅಪಾರ್ಟ್ ಮೆಂಟ್ಗೆ ಹೋಗಲು ರಸ್ತೆ ದಾಟುತ್ತಿದ್ದ ಸಂದರ್ಭ ಬೊಲೆರೊ ವಾಹನ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಶ್ರೀ ಕಮಲ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.