Thursday, March 12, 2026
Flats for sale
Homeಜಿಲ್ಲೆಮಂಗಳೂರು : ಭೀಕರ ರಸ್ತೆ ಅಪಘಾತ : ಯುವ ಯಕ್ಷಗಾನ ಕಲಾವಿದ ಸಾವು..!

ಮಂಗಳೂರು : ಭೀಕರ ರಸ್ತೆ ಅಪಘಾತ : ಯುವ ಯಕ್ಷಗಾನ ಕಲಾವಿದ ಸಾವು..!

ಮಂಗಳೂರು : ನಗರದ ಹೊರವಲಯದ ಅರ್ಕುಳ ಜಂಕ್ಷನ್ ಬಳಿ ಡಿ.31ರಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ ಹಾಗೂ ಯುವ ಯಕ್ಷಗಾನ ಕಲಾವಿದರು ಸಾವನ್ನಪ್ಪಿದ್ದಾರೆ.

ಮೃತರನ್ನು ವಿಟ್ಲ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಕಾರ್ಯದ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಹಾಗೂ ಸಸಿಹಿತ್ಲು ಭಗವತಿ ಯಕ್ಷಗಾನ ತಂಡದ ಕಲಾವಿದರಾದ 22 ವರ್ಷದ ಪ್ರವೀತ್ ಕುಮಾರ್ ಎಂದು ಗುರುತಿಸಲಾಗಿದೆ. ಸ್ತ್ರೀ ಪಾತ್ರಗಳ ಚಿತ್ರಣಕ್ಕೆ ಹೆಸರುವಾಸಿಯಾಗಿರುವ ಪ್ರವೀತ್ ಅವರು ಬಜ್ಪೆ ಕಂದಾವರ ಬೈಲ್‌ನಲ್ಲಿ ಆಯೋಜಿಸಲಾಗಿದ್ದ ಯಕ್ಷಗಾನ ಪ್ರದರ್ಶನಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ವರದಿಗಳ ಪ್ರಕಾರ, ಅರ್ಕುಳ ಜಂಕ್ಷನ್ ಬಳಿ ಪ್ರವೀತ್ ಅವರ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದರಿಂದ ಅಪಘಾತ ಸಂಭವಿಸಿದೆ. ದುರಂತವೆಂದರೆ ಐಸ್ ಕ್ರೀಂ ಸಾಗಿಸುತ್ತಿದ್ದ ವಾಹನವೊಂದು ಅವರ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಕುರಿತು ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular