Monday, June 8, 2026
Flats for sale
Homeಜಿಲ್ಲೆಮಂಗಳೂರು : ಮಳೆಗಾಲದಲ್ಲಿ ರಸ್ತೆ ಹೊಂಡದಿಂದ ಅಪಘಾತವಾದರೆ ಇಂಜಿನಿಯರ್‌ಗಳೇ ಹೊಣೆ: ಸಚಿವ ಯು.ಟಿ. ಖಾದರ್ ಎಚ್ಚರಿಕೆ.

ಮಂಗಳೂರು : ಮಳೆಗಾಲದಲ್ಲಿ ರಸ್ತೆ ಹೊಂಡದಿಂದ ಅಪಘಾತವಾದರೆ ಇಂಜಿನಿಯರ್‌ಗಳೇ ಹೊಣೆ: ಸಚಿವ ಯು.ಟಿ. ಖಾದರ್ ಎಚ್ಚರಿಕೆ.

ಮಂಗಳೂರು : ಮಳೆಗಾಲದಲ್ಲಿ ರಸ್ತೆ ಹೊಂಡಗಳಲ್ಲಿ ನೀರು ನಿಂತು ಅಪಘಾತ ಸಂಭವಿಸಿ ಸಾರ್ವಜನಿಕರ ಪ್ರಾಣಹಾನಿಯಾದರೆ ಸಂಬಂಧಿತ ಇಲಾಖೆಯ ಇಂಜಿನಿಯರ್‌ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರಸ್ತೆಗಳಲ್ಲಿ ನೀರು ನಿಲ್ಲುವ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಸೂಚಿಸಿದರು.
ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇಲಾಖಾ ವ್ಯಾಪ್ತಿಯನ್ನು ಮೀರಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಪದೇ ಪದೇ ಹೊಂಡ ಮುಚ್ಚುವ ತಾತ್ಕಾಲಿಕ ಕಾಮಗಾರಿಗಳ ಬದಲು ಶಾಶ್ವತ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದರು.

ಮಳೆಗಾಲದಲ್ಲಿ ವಿದ್ಯುತ್ ವ್ಯತ್ಯಯಗಳನ್ನು ತಡೆಯಲು ಮೆಸ್ಕಾಂ ವ್ಯಾಪ್ತಿಯಲ್ಲಿ ಹೆಚ್ಚುವರಿ ಲೈನ್‌ಮನ್‌ಗಳು ಮತ್ತು ವಾಹನಗಳನ್ನು ನಿಯೋಜಿಸಬೇಕು. ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನೆರೆ ಮತ್ತು ಮಳೆಯಿಂದ ಉಂಟಾಗುವ ರಸ್ತೆ ತಡೆಗಳನ್ನು ಸ್ಥಳೀಯ ಸಂಸ್ಥೆಗಳು ವಿಳಂಬವಿಲ್ಲದೆ ತೆರವುಗೊಳಿಸಬೇಕು. ಪರಿಹಾರ ಕಾರ್ಯಾಚರಣೆ ವೇಳೆ ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯ ಟಾಸ್ಕ್‌ಫೋರ್ಸ್‌ಗಳನ್ನು ಸಕ್ರಿಯಗೊಳಿಸಿ, ಪ್ರತಿ ಗ್ರಾಮ ಪಂಚಾಯತ್‌ಗೆ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ಸಚಿವರು ಸೂಚಿಸಿದರು. ಸಭೆಯಲ್ಲಿ ದರ್ಶನ್ ಹೆಚ್.ವಿ. ಮಳೆಗಾಲ ನಿರ್ವಹಣೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಅರುಣ್, ಡಿಸಿಎಫ್ ರವಿಶಂಕರ್ ಹಾಗೂ ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular