Saturday, March 7, 2026
Flats for sale
Homeಜಿಲ್ಲೆಮಂಗಳೂರು : ಕರಾವಳಿಯಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ತತ್ತರ, ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ,ಮುಂದಿನ 3...

ಮಂಗಳೂರು : ಕರಾವಳಿಯಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ತತ್ತರ, ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ,ಮುಂದಿನ 3 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ..!

ಮಂಗಳೂರು : ಮುಂದಿನ 3 ಗಂಟೆಗಳಲ್ಲಿ ಒಂದು ಅಥವಾ ಎರಡು. ಸ್ಥಳಗಳಲ್ಲಿ ಮಿಂಚು ಮತ್ತು 40-50 ವೇಗ ತಲುಪುವ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯವಾಗಲಿದ್ದು ಮಿಂಚು ಮತ್ತು 40-೫೦ ವೇಗಫಲ್ಲಿ ತಲುಪುವ ಬಿರುಗಾಳಿ ಸಣ್ಣಪುಟ್ಟ ಸಂಚಾರ ದಟ್ಟಣೆ, ದುರ್ಬಲ ಮರದ ಕೊಂಬೆಗಳನ್ನು ಕಿತ್ತುಹಾಕುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ ಮರಗಳ ಕೆಳಗೆ ಅಶ್ರಯ ಪಡೆಯಬೇಡಿ,ಎಲೆಕ್ನಿಕಲ್/ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣವೇ ಅನ್‌ಪ್ಲಗೆ ಮಾಡಿ. ತಕ್ಷಣ ಜಲಮೂಲಗಳಿಂದ ಹೊರಬನ್ನಿ, ವಿದ್ಯುಚ್ಚಕ್ತಿಯನ್ನು ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ.ನೀವು ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ ಎಂದು ಸಾರ್ವಜನಿಕರಿಗೆ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular