ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಮಣ್ಣಗುಡ್ಡ ಬಳಿ ಗುಡ್ಡ ಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿದೆ.


ಅವೈಜ್ಞಾನಿಕ ಕಾಮಗಾರಿಯಿಂದ ನಿರಂತರ ಕುಸಿಯುತ್ತಿದ್ದು ಇಂದು ಬೆಳಗಿನ ಜಾವ ನೂರಾರು ವಾಹನಗಳು ನಿಂತಲ್ಲೇ ನಿಂತಿವೆ.
ಬೆಳ್ಳಂಬೆಳಗ್ಗೆ ಪ್ರಯಾಣಿಕರು ಪರದಾಡುತ್ತಿದ್ದು ಮಣ್ಣು ತೆರವು ಕಾರ್ಯಾಚರಣೆ ಆರಂಭವಾಗಿದೆ.ಕಳೆದ ವಾರ ಕೂಡ ಅದೇ ಜಾಗದಲ್ಲಿ ಎರಡು ಭಾರೀ ಗುಡ್ಡ ಕುಸಿತವಾಗಿದ್ದು ಸ್ಥಳೀಯರು NHAI ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.


