ಮಂಗಳೂರು : ಹಿಂದೂ ವಿರೋಧಿ ಹೇಳಿಕೆಗಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತಿನ ಒಳಗೆ ಬಂಧಿಸಿ ಕಪಾಳಮೋಕ್ಷ ಮಾಡಬೇಕು ಎಂದು ಸುರತ್ಕಲ್ ಬಿಜೆಪಿ ಶಾಸಕ ಭರತ್ ಶೆಟ್ಟಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಹೇಳಿದ್ದರು ಈ ಹಿನ್ನೆಲೆ ಕಾವೂರು ಪೋಲಿಸ್ ಠಾಣೆಯಲ್ಲಿ F.I.R ದಾಖಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೆಟರ್ ಅನೀಲ್ ಕುಮಾರ್ ದೂರಿನ ಹಿನ್ನೆಲೆ BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಕೂಡ ಭರತ್ ಶೆಟ್ಟಿಯ ಹೇಳಿಕೆಯನ್ನು ಖಂಡಿಸಿ ಆಕ್ರೋಶ ಹೋರಹಾಕಿದ್ದರು. ಇದೀಗ ಪೋಲಿಸರು ಶಾಸಕ ಭರತ್ ಶೆಟ್ಟಿ ಯವರನ್ನು ಬಂದಿಸುತ್ತಾರೋ ಆಥವಾ ಪೋಲಿಸ್ ಠಾಣೆಯ ಜಾಮೀನಿನ ಮೇಲೆ ಬಿಡುಗಡೆಮಾಡುತ್ತಾರೊ ಎಂಬುದನ್ನು ಕಾದುನೋಡಬೇಕಾಗಿದೆ.


