Tuesday, October 21, 2025
Flats for sale
Homeಜಿಲ್ಲೆಮಂಗಳೂರು ; ಶಿರಾಡಿ ರಸ್ತೆಯಲ್ಲಿ ಹೊಂಡ ಮುಚ್ಚಲು ದ.ಕ ಜಿಲ್ಲಾಧಿಕಾರಿ ಸೂಚನೆ .

ಮಂಗಳೂರು ; ಶಿರಾಡಿ ರಸ್ತೆಯಲ್ಲಿ ಹೊಂಡ ಮುಚ್ಚಲು ದ.ಕ ಜಿಲ್ಲಾಧಿಕಾರಿ ಸೂಚನೆ .

ಮಂಗಳೂರು ; ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಮಾತನಾಡಿ, ಜನವರಿ 15 ರೊಳಗೆ ಶಿರಾಡಿ ಘಾಟ್ ರಸ್ತೆಯ ಗುಂಡಿಗಳನ್ನು ತುಂಬುವ ಕೆಲಸವನ್ನು ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎನ್‌ಎಚ್‌ಎಐ, ಪಿಡಬ್ಲ್ಯುಡಿ, ಸ್ಥಳೀಯ ಗ್ರಾಮ ಪಂಚಾಯಿತಿಗಳು, ಅರಣ್ಯ, ಕೆಪಿಟಿಸಿಎಲ್ ಮತ್ತು ಇತರ ಅಧಿಕಾರಿಗಳ ಸಭೆಯನ್ನು ಇತ್ತೀಚೆಗೆ ಕರೆಯಲಾಗಿದೆ. ಚತುಷ್ಪಥ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಸ್ತೆಯಲ್ಲಿನ ಗುಂಡಿಗಳು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಸಂಚಾರ ಸುಗಮಗೊಳಿಸಲು ಮರ, ವಿದ್ಯುತ್‌ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೂಡುಬಿದಿರೆಯಲ್ಲಿ ಡಿ.21ರಿಂದ ಅಂತಾರಾಷ್ಟ್ರೀಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ನಡೆಯಲಿದ್ದು, ಡಿ.20ರೊಳಗೆ ಗುಂಡಿಗಳನ್ನು ತುಂಬಿಸುವ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ.ಆದರೂ ಅಧಿಕಾರಿಗಳು ಅಸಮರ್ಥತೆ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಪೂರ್ಣಗೊಳಿಸಿ, ಅದರಂತೆ ಜನವರಿ 15ರ ವರೆಗೆ ಗಡುವು ನೀಡಿದ್ದೇನೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular