Wednesday, October 22, 2025
Flats for sale
Homeಜಿಲ್ಲೆಮಂಗಳೂರು : ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪ ತೆರಳುತ್ತಿದ್ದ ಸರಕು ಹಡಗು ಮುಳುಗಡೆ,6 ಮಂದಿ ಸಣ್ಣ ಡಿಂಗಿ...

ಮಂಗಳೂರು : ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪ ತೆರಳುತ್ತಿದ್ದ ಸರಕು ಹಡಗು ಮುಳುಗಡೆ,6 ಮಂದಿ ಸಣ್ಣ ಡಿಂಗಿ ಬೋಟಿಗೆ ಹಾರಿ ಪ್ರಾಣಾಪಾಯದಿಂದ ಪಾರು..!

ಮಂಗಳೂರು : ಸಮುದ್ರ ತೀರದಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಎಂಎಸ್‌ವಿ ಸಲಾಮತ್ ಹೆಸರಿನ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಮಂಗಳೂರಿನ ಸರಕು ಸಾಗಣೆ ಹಡಗು ಸಮುದ್ರ ಮಧ್ಯದಲ್ಲಿ ಮುಳುಗಡೆಯಾದ ಮಾಹಿತಿ ದೊರೆತಿದೆ.

ಸರಕು ಸಾಗಣೆ ಹಡಗು 2025ರ ಮೇ 12ರಂದು ಮಂಗಳೂರು ಬಂದರಿನಿಂದ ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು ಮೇ.18ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು ಹಡಗಿನಲ್ಲಿ 06 ಭಾರತೀಯ ಸಿಬ್ಬಂದಿ ಮತ್ತು ಸಿಮೆಂಟ್ ಹಾಗೂ ನಿರ್ಮಾಣ ಸಾಮಗ್ರಿ ಇದ್ದು ಸಮುದ್ರ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ನೀರು ನುಗ್ಗಿದ್ದು, ಹಡಗು ಮುಳುಗಿದೆಯಾಗಿದೆ. ಈ ವೇಳೆ ಎಲ್ಲಾ 06 ಸಿಬ್ಬಂದಿ ಹಡಗಿನಿಂದ ಹಾರಿ ಸಣ್ಣ ಡಿಂಗಿ ಬೋಟಿನಲ್ಲಿ ಪ್ರಾಣ ಉಳಿಸಿಕೊಂಡಿದ್ದಾರೆಂದು ತಿಳಿದಿದೆ.

ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯ ನಡೆಸಿದ್ದು ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ ನ ‘ವಿಕ್ರಂ’ ಶಿಪ್ ನಲ್ಲಿ ರಕ್ಷಣಾ ಕಾರ್ಯ ನಡೆಸಿದ್ದು ಇಸ್ಮಾಯಿಲ್ ಶರೀಫ್, ಅಲೆಮನ್ ಅಹ್ಮದ್ ಬಾಯ್ ಗಾವ್ಡ, ಕಾಕಲ್ ಸುಲೇಮಾನ್ ಇಸ್ಮಾಯಿಲ್, ಅಕ್ಬರ್ ಅಬ್ದುಲ್ ಸುರಾನಿ, ಕಸಂ ಇಸ್ಮಾಯಿಲ್ ಮತ್ತು ಅಜ್ಮಲ್ ರಕ್ಷಣೆ ಮಾಡಲಾಗಿದೆಂದು ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular