ಮಂಗಳೂರು ; ಬೀಬಿ ಅಲಾಬಿ ರಸ್ತೆ ಬಳಿಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್ನಲ್ಲಿ ವಾಸವಿದ್ದ 20 ವರ್ಷದ ಇಂಜಿನಿಯರಿಂಗ್ ವಿಧಾರ್ಥಿ ಮೇ 8ರ ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಉಡುಪಿ ಜಿಲ್ಲೆಯವರಾದ ಇವರು ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿ ಓದುತ್ತಿದ್ದರು. ಮೃತರನ್ನು ನಿತೇಶ್ ರಾವ್ ಎಂದು ಗುರುತಿಸಲಾಗಿದೆ.
ನಿತೇಶ್ ರಾವ್ ತಾಯಿ ಮತ್ತು ಸಹೋದರಿಯನ್ನು ಅಗಲಿದ್ದು . ಅವರ ತಂದೆ ಸುಮಾರು ಐದು ವರ್ಷಗಳ ಹಿಂದೆ ನಿಧನರಾಗಿದ್ದಾರೆ.
ಆತನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು,ತನಿಖೆ ನಡೆಯುತ್ತಿವೆ.


