Monday, July 7, 2025
Flats for sale
Homeರಾಜ್ಯಮಂಡ್ಯ : ಶಾಲೆಯ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿಯಿಂದ ಕಿರುಕುಳ,ಅವಮಾನ,ಮನನ್ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ..!

ಮಂಡ್ಯ : ಶಾಲೆಯ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿಯಿಂದ ಕಿರುಕುಳ,ಅವಮಾನ,ಮನನ್ನೊಂದು ವಿದ್ಯಾರ್ಥಿನಿ ಆತ್ಮಹತ್ಯೆ..!

ಮಂಡ್ಯ : ಮಂಡ್ಯ ದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಪ್ರಾರ್ಥನೆಗೂ ನಿಲ್ಲಲು ಅವಕಾಶ ನೀಡದೆ ಅವಮಾನ ಮಾಡಿದ್ದೂ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ಎಸ್‌ಎಸ್ ಎಲ್‌ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ನಡೆದಿದೆ.

ಮದ್ದೂರು ತಾಲೂ ಕಿನ ಹುಲಿಗೆರೆಪುರ ಗ್ರಾಮದಲ್ಲಿ ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ನಡೆದಿದೆ.

ಅನಿಕೇತನ ವಿದ್ಯಾಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ಎಚ್.ಎಲ್.ಮಿಲನಾ (15) ಆತ್ಮ ಹತ್ಯೆಗೆ ಶರಣಾದ ವಿದ್ಯಾರ್ಥಿನಿ.ಲಕ್ಷ್ಮಿ ಪ್ರಸಾದ್, ಎಚ್.ಎಸ್.ರಶ್ಮಿ ದಂಪತಿ ಪುತ್ರಿ, ಮಿಲನಾ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗೆ ಆಯ್ಕೆ ಆಗಿದ್ದರೂ ಸಹ ಶಾಲೆ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಶೈಲಜಾ ಸೇರಿದಂತೆ ಮೂವರು ಶಿಕ್ಷಕರು ಶಾಲಾ ಶುಲ್ಕ ಪಾವತಿ ಮಾಡುವಂತೆವಿದ್ಯಾರ್ಥಿನಿಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.’ ಪ್ರಾರ್ಥನಾ ಸಮಯದಲ್ಲಿ ಭಾಗವಹಿಸಲು ಅವಕಾಶ ಕೊಡದೆ ಬಹಿಷ್ಕಾರ ಹಾಕಿದ್ದರು ಎನ್ನಲಾಗಿದೆ. ಶನಿವಾರ ಸಹ ಅವಕಾಶ ನೀಡಿರಲಿಲ್ಲ. ಅವಮಾನಗೊಂಡಿದ್ದ ಮಿಲನಾ ಮಧ್ಯಾಹ್ನ ಶಾಲೆ ಬಿಟ್ಟು ಬಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರಿದ್ದಾರೆ.ಈ ಸಂಬಂಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular