Saturday, July 18, 2026
Homeದೇಶಮುಂಬೈ : ಕಾರ್ಪೊರೇಟ್ ಜಿಹಾದ್ ಪ್ರಕರಣ : ನಿದಾ ಖಾನ್‌ಗೆ ನಿರೀಕ್ಷಣಾ ಜಾಮೀನು ನಿರಾಕರಣೆ.

ಮುಂಬೈ : ಕಾರ್ಪೊರೇಟ್ ಜಿಹಾದ್ ಪ್ರಕರಣ : ನಿದಾ ಖಾನ್‌ಗೆ ನಿರೀಕ್ಷಣಾ ಜಾಮೀನು ನಿರಾಕರಣೆ.

ಮುಂಬೈ : ಟಿಸಿಎಸ್ ಸಂಬಂಧಿತವಾಗಿ ಹೇಳಲಾಗುತ್ತಿರುವ “ಕಾರ್ಪೊರೇಟ್ ಜಿಹಾದ್” ಮತ್ತು ಬಲವಂತದ ಮತಾಂತರ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಚ್‌ಆರ್ ನಿದಾ ಖಾನ್‌ಗೆ ನಿರೀಕ್ಷಣಾ ಜಾಮೀನು ನೀಡಲು ನಾಸಿಕ್ ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಕೆ.ಜಿ. ಜೋಶಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ನಿದಾ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಅರ್ಜಿದಾರರ ಪರ ವಕೀಲ ಬಾಬಾ ಸಯ್ಯದ್ ವಾದಿಸಿ, ಮಹಾರಾಷ್ಟ್ರದಲ್ಲಿ ಬಲವಂತದ ಮತಾಂತರಕ್ಕೆ ಸಂಬಂಧಿಸಿದ ಕಾನೂನು ಇದ್ದರೂ, ತಮ್ಮ ಕ್ಲೈಂಟ್ ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಕಾಯ್ದೆಯನ್ನು ಉಲ್ಲಂಘಿಸಿಲ್ಲ ಎಂದು ತಿಳಿಸಿದರು. ಇದಕ್ಕೆ ವಿರೋಧವಾಗಿ ಸರ್ಕಾರದ ಪರವಾಗಿ ವಾದಿಸಿದ ಅಜಯ್ ಮಿಸಾರ್, ಪ್ರಕರಣದ ಗಂಭೀರತೆಯನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಎರಡೂ ಬದಿಯ ವಾದಗಳನ್ನು ಆಲಿಸಿದ ಬಳಿಕ ನ್ಯಾಯಪೀಠವು ನಿದಾ ಖಾನ್‌ಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಮುಂದುವರಿಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular