ಮೈಸೂರು : ರಾಜ್ಯದಲ್ಲಿ ಕೊಲೆಗೆ ಪ್ರತೀಕಾರದ ಹತ್ಯೆಗಳು ನಡೆಯುತ್ತಿದ್ದು ಗುಪ್ತಚರ ಇಲಾಖೆಯ ವೈಫಲ್ಯ ಎತ್ತಿ ಕಾಣುತ್ತಿದೆ.ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ’ ಎಂದು ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ ಹಾಕಲಾಗಿದೆ.ಪುನೀತ್ ಕೆರೆಹಳ್ಳಿಗೆ ವಾಟ್ಸಾಪ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಗೋವು ಸಾಗಾಣಿಕೆ ವೇಳೆ ಇದ್ರಿಷ್ ಪಾಷಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿ ಐವರು ಆರೋಪಿಗಳನ್ನ ಬಂಧಿಸಲಾಗಿತ್ತು. ಬಳಿಕ 2023 ಮೇ ತಿಂಗಳಿನಲ್ಲಿ ಹೈಕೋರ್ಟ್ ಎಲ್ಲರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಪುನೀತ್ ಕೆರೆಹಳ್ಳಿಗೆ ವಾಟ್ಸಾಪ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಜೊತೆಗೆ next you ”ಮುಂದೆ ನಿನ್ನದು ಕೊಲೆ ” ಎಂದು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಜೀವಬೆದರಿಕೆ ಹಾಕಲಾಗಿದೆ.ಆದರೆ ಮಂಗಳೂರಿನಲ್ಲೂ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲೂ ಪೊಲೀಸ್ ಇಲಾಖೆಯ ವೈಫಲ್ಯ ಕಂಡಿದ್ದು ರಾಜ್ಯದಲ್ಲಿದ್ದ ಸಿದ್ದರಾಮಯ್ಯ ಸರಕಾರದಿಂದ ವ್ಯವಸ್ಥಿತವಾಗಿ ಹಿಂದೂಗಳ ಹತ್ಯೆ ನಡೆಯುತ್ತಿದೆಂದು ಬಿಜೆಪಿ ನಾಯಕರು ಆಕ್ರೋಶಹೊರಹಾಕಿದ್ದಾರೆ.