Saturday, March 14, 2026
Flats for sale
Homeರಾಜ್ಯಮೈಸೂರು : ಹುಣಸೂರಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ.

ಮೈಸೂರು : ಹುಣಸೂರಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ.

ಮೈಸೂರು : ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗೊಮ್ಮಟಗಿರಿ ಬೆಟ್ಟದ ಬಳಿ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ಮಾಡಿದೆ.

ಶಿವಕುಮಾರ್ ಮತ್ತು ಕವಿತಾ ಎಂಬುವರು ತಮ್ಮ ಹುಟ್ಟೂರಾದ ಹುಣಸೂರು ತಾಲೂಕಿನ ಹಳೇಬೀಡಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಚಿರತೆ ದಾಳಿ ಮಾಡಿದಾಗ ಶಿವಕುಮಾರ್ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ. ಪತ್ನಿ ಕವಿತಾ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದಾರೆ.

ಆಕೆಯನ್ನು ಬಿಳಿಕೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಳಿಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular