ಮೈಸೂರು : ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗೊಮ್ಮಟಗಿರಿ ಬೆಟ್ಟದ ಬಳಿ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ಮಾಡಿದೆ. ಶಿವಕುಮಾರ್ ಮತ್ತು ಕವಿತಾ ಎಂಬುವರು ತಮ್ಮ ಹುಟ್ಟೂರಾದ ಹುಣಸೂರು ತಾಲೂಕಿನ ಹಳೇಬೀಡಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಚಿರತೆ ದಾಳಿ ಮಾಡಿದಾಗ ಶಿವಕುಮಾರ್ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ. ಪತ್ನಿ ಕವಿತಾ ಬೈಕ್ನಿಂದ ಬಿದ್ದು ಗಾಯಗೊಂಡಿದ್ದಾರೆ. ಆಕೆಯನ್ನು ಬಿಳಿಕೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಳಿಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


