ಲಕ್ಷ್ಮೇಶ್ವರ : ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ನಾಕಾದಲ್ಲಿ ರಸ್ತೆ ಬಂದ್ ಮಾಡಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.
ವಿದ್ಯಾರ್ಥಿ ವೇತನ, ಬಸ್ ಸೌಲಭ್ಯ, ಸೇರಿದಂತೆ ಹಲವು ಬೇಡಿಕೆ ಈಡೆರಿಸಬೇಕು ವಿದ್ಯಾರ್ಥಿ ವೇತನ ನೀಡದಿರುವುದು ಶಿಕ್ಷಣ ವಂಚಿತರಾಗಲು ಸರ್ಕಾರ ಎಡೆಮಾಡಿಕೊಡುತ್ತಿದೆ ಈ ಕೂಡಲೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿದ ಎಬಿವಿಪಿ ವಿದ್ಯಾರ್ಥಿ ಪರಿಷತ್ತ. ವಿದ್ಯಾರ್ಥಿಗಳಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಆಗಿದೆ. ಸರಿಯಾದ ಸಮಯಕ್ಕೆ ಬಸ್ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ,ಸ್ಥಳಕ್ಕೆ ತಹಶಿಲ್ದಾರ ಅಮಾಸಿ ಆಗಮಿಸಿ ಮನವಿ ಸ್ವೀಕರಿಸಿದ್ದು,ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.


