ಶಿವಮೊಗ್ಗ : ಸಾಗರ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆ ಸಾವನಪ್ಪಿದ ಘಟನೆ ನಡೆದಿದೆ.ಮೃತರನ್ನು ನಗರ ಹೋಬಳಿಯ ದುಬಾರತಟ್ಟೆ ನಿವಾಸಿ ಅಶ್ವಿನಿ (29) ಎಂದು ತಿಳಿದುಬಂದಿದೆ.
ಶಿವಮೊಗ್ಗ ಜಿಲ್ಲೆಯ ನಗರ ಹೋಬಳಿಯ ದುಬಾರತಟ್ಟೆ ಗ್ರಾಮದ ಮಹಿಳೆ ಅಶ್ವಿನಿ ಜ.26 ರಂದು ಸಾಗರ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದರೂ ಬಳಿಕ ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿದ್ದರೂ ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವಪ್ಪಿದ್ದಾರೆ.
ಮೃತ ಮಹಿಳೆ ಎಂಸಿಎ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂಸಿಎ ಸ್ನಾತಕೊತ್ತರ ಪದವಿಯಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದರು ಇದೀಗ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು ನ್ಯಾಯಕ್ಕಾಗಿ ಅಂಗಲಾಚಿದ್ದಾರೆ.