Sunday, June 1, 2025
Flats for sale
Homeಜಿಲ್ಲೆಸುಳ್ಯ : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಲು ಕೊರಗಜ್ಜ ಹರಕೆ ಕೋಲ, ಬಿಜೆಪಿ ರಾಜ್ಯಾಧ್ಯಕ್ಷ...

ಸುಳ್ಯ : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಲು ಕೊರಗಜ್ಜ ಹರಕೆ ಕೋಲ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಾಗಿ ..!

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರಗಜ್ಜ ದೈವದ ಕಾರ್ಣಿಕ ನಡೆಯುತ್ತಾನೆ ಇರುತ್ತೆ ಅದರಂತೆ ಇಲ್ಲಿ ದೈವ ದೇವರಗಳ ಪವರ್ಫುಲ್ ಕಾರ್ಣಿಕ. ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ವಿಶೇಷ ಹರಕೆಯ ಶ್ರೀಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಕಾರ್ಯಕ್ರಮ ನಡೆಯಿತು.

ಈ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗಿಯಾಗಿದ್ದರು ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಬಿಜೆಪಿ ಜಯನಗರ ಬೂತ್ ಸಮಿತಿ ಹರಕೆ ಹೇಳಿತ್ತು. ಅದರಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ಕೊರಗಜ್ಜ ದೈವದ ವಿಶೇಷ ಹರಕೆ ತೀರಿಸಲು ವಿಶೇಷ ಕೋಲ ನಡೆಯಿತು ಈ ನೇಮೋತ್ಸವಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಕೊರಗಜ್ಜ ದೈವದಿಂದ ಆಶೀರ್ವಾದ ಪಡೆದರು.

ಈ ವೇಳೆ ಸಂಸದ ಬ್ರಿಜೇಶ್ ಚೌಟ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿ ಹಲವು ಮಂದಿ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯ ಬಿಜೆಪಿ ಘಟಕ ಸಂಸದ ಬ್ರಿಜೇಶ್ ಚೌಟ ಮೂಲಕ ಕೊರಗಜ್ಜ ದೈವದ ಪ್ರಸಾದವನ್ನು ಪ್ರಧಾನಿ ನರೇಂದ್ರ ಮೋದಿಗೆ ತಲುಪಿಸಲಿದೆ ಎಂದು ಈ ಸಂಧರ್ಭದಲ್ಲಿ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular