Sunday, June 1, 2025
Flats for sale
Homeದೇಶಹೈದರಾಬಾದ್ : ಗುಲ್ಜಾರ್‌ಹೌಸ್‌ನಲ್ಲಿ ಅಗ್ನಿಅವಘಡ 17 ಮಂದಿ ಸಜೀವ ದಹನ..!

ಹೈದರಾಬಾದ್ : ಗುಲ್ಜಾರ್‌ಹೌಸ್‌ನಲ್ಲಿ ಅಗ್ನಿಅವಘಡ 17 ಮಂದಿ ಸಜೀವ ದಹನ..!

ಹೈದರಾಬಾದ್ : ಚಾರ್‌ಮಿನಾರ್ ಬಳಿಯಿರುವ ಗುಲ್ಜಾರ್ ಹೌಸ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು ಮಹಿಳೆಯರು,ಮಕ್ಕಳೂ ಸೇರಿದಂತೆ 17 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ಹೈದರಾಬಾದ್‌ನಲ್ಲಿ ಇಂದು ಮುಂಜಾನೆ ನಡೆದಿದೆ.

ಮುಂಜಾನೆ 6:30ರ ಸುಮಾರಿಗೆ ಘಟನೆ ನಡೆದಿದೆ. ಗುಲ್ಜಾರ್ ಹೌಸ್‌ನಲ್ಲಿ ೩೦ಕ್ಕೂ ಹೆಚ್ಚು ಮಂದಿ ಇರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಅವಘಡದ ಪರಿಣಾಮ ಉಸಿರಾಟದ ತೊಂದರೆಯಿAದಾಗಿ 16ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಅದರಲ್ಲಿ ಕೆಲವರ ಸ್ಥಿತಿ ಚಿಂತಾಜಕವಾಗಿದೆ. ಸಾವು ನೋವು ಇನ್ನಷ್ಟು ಹೆಚ್ಚಬಹುದು ಎಂದು ಹೇಳಲಾಗಿದೆ.

ಮೃತರನ್ನು ರಾಜೇಂದ್ರ ಕುಮಾರ್ (67), ಅಭಿಷೇಕ್ ಮೋದಿ, ಸುಮಿತ್ರಾ, ಮುನ್ನಿಬಾಯ್, ಆರುಷಿ ಜೈನ್, ಶೀತಲ್ ಜೈನ್, ಇರಾಜ್ ಹಾಗೂ ಅರ್ಷಾದಿಗುಪ್ತಾ ಎಂದು ಗುರುತಿಸಲಾಗಿದೆ. ಇನ್ನೂ ಕೆಲವರ ಗುರುತು ಪತ್ತೆ ಮಾಡುವ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಲ್ಜಾರ್ ಹೌಸ್‌ನ ಮೊದಲ ಮಹಡಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಶಾರ್ಟ್ ಸಕ್ರೂ÷್ಯಟ್‌ನಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೂ ಘಟನೆಗೆ ನಿಖರ ಕಾರಣ ಪತ್ತೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಕೇಂದ್ರ ಸಚಿವ ಭೇಟಿ ಪರಿಶಿಲನೆ ಘಟನೆಯ ಸಂಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಕಿಷನ್ ರೆಡ್ಡಿ ಭೇಟಿ
ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿದ ಕಿಶನ್ ರೆಡ್ಡಿ ಬೆಂಕಿಯಲ್ಲಿ ಹಾನಿಗೊಳಗಾದ ಕುಟುಂಬ ಗುಲ್ಜಾರ್ ಹೌಸ್ ಪ್ರದೇಶದಲ್ಲಿ ತಮ್ಮ ಅಂಗಡಿಯ ಮೇಲೆ ವಾಸಿಸುತ್ತಿತ್ತು. ಕುಟುಂಬ ಸದಸ್ಯರನ್ನು ಭೇಟಿಯಾದೆ. ಇಂತಹ ಘಟನೆಗಳು ತುಂಬಾ ದುಃಖಕರ. ನಾನು ಯಾರನ್ನೂ ದೂಷಿಸುತ್ತಿಲ್ಲ, ಆದರೆ ಪೊಲೀಸ್, ಪುರಸಭೆ, ಅಗ್ನಿಶಾಮಕ ಮತ್ತು ವಿದ್ಯುತ್ ಇಲಾಖೆಗಳನ್ನು ಬಲಪಡಿಸಬೇಕು.ಅಗ್ನಿಶಾಮಕ ದಳದ ಬಳಿ ಆರಂಭದಲ್ಲಿ ಸರಿಯಾದ ಉಪಕರಣಗಳಿಲ್ಲ ಎಂದು ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ಉತ್ತಮ ತಂತ್ರಜ್ಞಾನ
ಬಲಪಡಿಸಬೇಕು, ಕೇಂದ್ರ ಸರ್ಕಾರ ಮತ್ತು ಪ್ರಧಾನಿಯೊಂದಿಗೆ ಮಾತನಾಡುತ್ತೇನೆ ಮತ್ತು ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ಸಹಾಯವನ್ನು
ಪಡೆಯಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular