ತಮಿಳುನಾಡು : ರಾಜ್ಯಪಾಲ ಆರ್ ಎನ್ ರವಿ ಅವರು ಜೈಲು ಸೇರಿರುವ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಾಜಿಯ ನ್ಯಾಯಾಂಗ ಬಂಧನವನ್ನು ಚೆನ್ನೈ ನ್ಯಾಯಾಲಯವು ಜುಲೈ 12 ರವರೆಗೆ ವಿಸ್ತರಿಸಿದೆ. ಜೂನ್ 14ರಂದು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ನಂತರ, ತನಿಖೆಯ ಸಮಯದಲ್ಲಿ ಅವರು ಅಸ್ವಸ್ಥತೆ ಮತ್ತು ಎದೆನೋವು ಎಂದು ದೂರಿದ ನಂತರ ಅವರನ್ನು ಇಲ್ಲಿನ ಓಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು ಸೆಂಥಿಲ್ ಬಾಲಾಜಿಯನ್ನು ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಂತರ, ಸೆಂಥಿಲ್ ಬಾಲಾಜಿ ಅವರನ್ನು ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರನ್ನು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು.


