Saturday, January 17, 2026
Flats for sale
Homeರಾಜ್ಯನವ ದೆಹಲಿ : ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು.

ನವ ದೆಹಲಿ : ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು.

ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಮಧ್ಯ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯಪಾಲರನ್ನು ಕರೆದೊಯ್ಯಲು ಚಾಲಕ ರವಿಕುಮಾರ್ ಬಂದಿದ್ದರು. ಆ ವೇಳೆ ಅವರಿಗೆ ಹೃದಯಾಘಾತ ವಾಗಿದೆ. ಮೃತಪಟ್ಟ ದುರ್ದೈವಿ ರವಿಕುಮಾರ್ ಎಸ್. ಕಾಳೆ .

ರಾತ್ರೆ ಪಳೆಯಾ ಕೆಲಸದಲ್ಲಿ ರಾಜ್ಯಪಾಲರನ್ನು ಕಾರಿನಲ್ಲಿ ಕರೆದೊಯ್ಯಲು ಸಿದ್ದತೆ ಮಾಡಿಕೊಳ್ಳುವ ವೇಳೆ ರವಿಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಹೃದಯಾಘಾತವೂ ಆಗಿದೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನಗಳು ನಡೆಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದಾರೆ.

ರಾಜ್ಯಪಾಲರು ನಿಗದಿತ ಸಮಯಕ್ಕಿಂತ ಬೇಗ ಆಗಮಿಸಿದ್ದರೆ,ರವಿಕುಮಾರ್ ಅವರೇ ಕಾರು ಏರಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು.

ಘಟನೆಯ ಬಳಿಕ ರಾಜ್ಯಪಾಲರು ಹೆಚ್ಚುವರಿ ವಾಹನ ಬಳಸಿಕೊಂಡು ರಾಜ್ಯಭವನಕ್ಕೆ ತೆರಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular