ಬೆಂಗಳೂರು : ಕೊರೊನ ಮಹಾಮಾರಿ ರಾಜ್ಯದಲ್ಲಿ ಮೊದಲ ಬಲಿಯನ್ನು ಪಡೆದಿದೆ ,ಆದ್ದರಿಂದ ರಾಜ್ಯದಲ್ಲಿ ಕೋವಿಡ್ನಿಂದ ಒರ್ವ ವ್ಯಕ್ತಿ ಇಂದು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು ಮತ್ತು ಅನಾರೋಗ್ಯದಿಂದ ಬಳಸುತ್ತಿರುವ ಮಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ನಾವು ನಮ್ಮ ಮುನ್ನೆಚ್ಚರಿಕೆ ವಹಿಸಿದರೆ ಕೋವಿಡ್ ಭಯಪಡುವ ಅಗತ್ಯವಿಲ್ಲ. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಚರ್ಚಿಸಿದ್ದೇವೆ. ಶೀಘ್ರದಲ್ಲೇ ಸಲಹೆಯನ್ನು ನೀಡುತ್ತೇವೆ.60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಹೃದಯ ಸಮಸ್ಯೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿದ್ದಾರೆ.
ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೋವಿಡ್ನಿಂದ ಓರ್ವ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ ಈ ಹಿನ್ನೆಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಮಹಾಮಾರಿ ಮತ್ತೊಮ್ಮೆ ದೇಶದಲ್ಲಿ ರುದ್ರ ತಾಂಡವವಾಡುವ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ಐದು ಮತ್ತು ಉತ್ತರ ಪ್ರದೇಶದಲ್ಲಿ ಒಂದು,ಕರ್ನಾಟಕದಲ್ಲಿ ಒಂದು ಕೋವಿಡ್ -19 ಸಾವು ವರದಿಯಾದ ನಂತರ ಸಾವಿನ ಸಂಖ್ಯೆ ಈಗ 10 ದಾಟಿದ್ದು ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅAಶಗಳ ಪ್ರಕಾರ, ಕೋವಿಡ್ 142 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಸಕ್ರಿಯ ಕ್ಯಾಸೆಲೋಡ್ 1970 ಕ್ಕೆ ಏರಿದೆ. ಕರ್ನಾಟಕದಲ್ಲಿ ಒಂದು ಸಾವು ದಾಖಲಾದ ನಂತರ ಸಾವಿನ ಸಂಖ್ಯೆ 5,33,318 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಸೋಂಕಿನಿAದ ಚೇತರಿಸಿಕೊಂಡವರ ಸAಖ್ಯೆ 4.44 ಕೋಟಿಗೆ (4,44,70,೦76) ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆ ದರವನ್ನು 98.81ಪ್ರತಿಶತಕ್ಕೆ ನಿಗದಿಪಡಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ 260 ಹೊಸ ಕೋವಿಡ್ -19 ಸೋಂಕುಗಳನ್ನು ದಾಖಲಿಸಿದೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 1828ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದುವರೆಗೆ ದೇಶಾದ್ಯಂತ 220.67 ಕೋಟಿ ಕೋವಿಡ್-19 ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯದ ವೆಬ್ಸೈಟ್ ಸೂಚಿಸಿದೆ.


