Monday, February 2, 2026
Flats for sale
Homeಜಿಲ್ಲೆಕಡಬ ; ಕುಮಾರ ಪರ್ವತ ಚಾರಣಿಗರ ಅನ್ನದಾತ ಗಿರಿಗದ್ದೆ ಮಹಾಲಿಂಗ ಭಟ್ ಹೃದಯಾಘಾತದಿಂದ ನಿಧನ.

ಕಡಬ ; ಕುಮಾರ ಪರ್ವತ ಚಾರಣಿಗರ ಅನ್ನದಾತ ಗಿರಿಗದ್ದೆ ಮಹಾಲಿಂಗ ಭಟ್ ಹೃದಯಾಘಾತದಿಂದ ನಿಧನ.

ಕಡಬ ; ಸುಬ್ರಹ್ಮಣ್ಯದ ಕುಮಾರ ಪರ್ವತ ಅಂದರೆ ದಟ್ಟ ಅಡವಿ ಅಚ್ಚ ಹಸಿರಿನಿಂದ ಕೂಡಿದ ಕಾಡು.ಅದರೆ ಅಲ್ಲಿಗೆ ಹೋಗುವಾಗ ಅಂದಾಕ್ಷಣ ಪಕ್ಕ ನೆನಪಿಗೆ ಬರುವುದು ಎತ್ತರದ ಬೆಟ್ಟ ಮತ್ತು ಮಹಾಲಿಂಗ ಭಟ್ರ ಊಟ ಆತಿಥ್ಯ. ಕುಮಾರ ಪರ್ವತಕ್ಕೆ ಚಾರಣ ಮಾಡುವವರು ಸುಬ್ರಹ್ಮಣ್ಯದಿಂದ ಕಾಲುನಡಿಗೆಯಲ್ಲಿ ದಟ್ಟ ಅಡವಿಯ ನಡುವೆ ಸುಮಾರು 7km ನಡೆದುಕೊಂಡು ಹೋದ್ರೆ ಸಣ್ಣ ಬೆಟ್ಟದ ತಪ್ಪಲಲ್ಲಿ ಒಂದು ಮನೆ ಸಿಗುತ್ತದೆ. ಅದೇ ಗಿರಿಗದ್ದೆಯ ಭಟ್ರ ಮನೆ. ಹೆಚ್ಚಾಗಿ ಕುಮಾರ ಪರ್ವತ ಚಾರಣ ಒಂದು ದಿನದಲ್ಲಿ ಮುಗಿಯುವಂತದ್ದು ಕಷ್ಟ ಸಾಧ್ಯ ಹಾಗಾಗಿ ಚಾರಣಿಗರು ಭಟ್ರ ಮನೆಯಲ್ಲಿ ಒಂದುದಿನ ನಿಂತು ಮಾರನೇ ದಿನ ಪರ್ವತ ಹತ್ತಿ ಇಳಿಯುತ್ತಾರೆ. ಆ ಒಂದು ದಿನದಲ್ಲಿ ಭಟ್ರು ಕೊಡುವ ಅನ್ನ, ತಿಳಿ ಸಾರು, ಮಜ್ಜಿಗೆ ಉಪ್ಪಿನಕಾಯಿ ಅಮೃತಕ್ಕೆ ಸಮ. ಭಟ್ರು ನಗುನಗುತ್ತಾ, ಮಾತಾಡಿಸುತ್ತಾ ಊಟ ಬಡಿಸುವಾಗ ಎಷ್ಟೇ ಕಲ್ಲು ಹೃದಯದವನಿಗಾದರೂ ಮನಸ್ಸಲ್ಲಿ ಅವರ ಬಗ್ಗೆ ಹೇಳಲಾಗದಷ್ಟು ಗೌರವ ಪ್ರೀತಿ ತುಂಬಿ ಬರಬಹುದು. ಭಟ್ರ ಮನೆಯಲ್ಲಿ ಕೊಡುವ ಆತಿಥ್ಯ ಯಾವುದೇ 5ಸ್ಟಾರ್ ಹೋಟೆಲಿಗೆ ಕಡಿಮೆಇಲ್ಲ ಎಂಬುದು ಎಲ್ಲಾ ಚಾರಣಿಗರ ಮಾತು ,ನಮ್ಮ ಬಳಗಕೂಡ ಈ ಭಟ್ಟರ ಅತ್ಮಿಯರು.

ಈ ಆಧುನಿಕ ಯುಗದಲ್ಲಿ ಆ ಕಾಡಿನ ಮಧ್ಯೆ ಬದುಕುವುದು ಸುಲಭದ ಮಾತಲ್ಲ. ಅವ್ರಿಗೆ ದಿನಸಿ ತರಬೇಕು ಅಂದರೂ, ಏನೇ ಖರೀದಿ ಮಾಡ್ಬೇಕು ಅಂದರೂ, ಅಸೌಖ್ಯ ಆದರೂ ಸುಬ್ರಹ್ಮಣ್ಯಕ್ಕೆ 7 ಕಿಲೋಮೀಟರ್ ಕಲ್ಲು ಮುಳ್ಳುಗಳ ಹಾದಿಯಲ್ಲಿ ಕಾಲ್ನಡಿಗೆಯಲ್ಲಿ ಬಂದು ಖರೀದಿ ಮಾಡಿ ಮತ್ತೆ 7 ಕಿಲೋಮೀಟರ್ ನಡೆದುಕೊಂಡೇ ಮನೆ ಸೇರಬೇಕು. ಅಲ್ಲಿ ತನಕ ಅಕ್ಕಿ, ತರಕಾರಿ ಇನ್ನಿತರ ವಸ್ತುಗಳನ್ನು ಹೊತ್ತುಕೊಂಡೇ ಹೋಗಿ ಅಡುಗೆ ಮಾಡಿ ಬಡಿಸುವ ಅವರ ವಿಶಾಲವಾದ ಮನಸ್ಸು ಇನ್ನಷ್ಟು ದಿನ ಇರಬೇಕಿತ್ತು‌ ಅದರೆ ನಾವು ಅವರನ್ನು ಕಳೆದುಕೊಂಡಿದ್ದೇವೆ ಎಂದು ಅವರ ಆತ್ಮೀಯ ಚಾರಣಿಗ ತನ್ನ ಹೃದಯ ಗೆದ್ದಿದ್ದ ಭಟ್ರು ಇವತ್ತು ಬೆಳಿಗ್ಗೆ ಹೃದಯಾಘಾತ ಆಗಿ ತೀರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಹೇಳಬೇಕು ಅಂದ್ರೆ ಆ ಮನೆಯ 60ಕ್ಕೂ ಹೆಚ್ಚು ದೇಸಿ ಹಸುಗಳು, ಕರುಗಳು ತನ್ನ ಪ್ರೀತಿಯ ಯಜಮಾನನನ್ನು ಕಳಕೊಂಡಿದೆ. ಚಾರಣ ಪ್ರಿಯರು ಒಬ್ಬ ಶ್ರೇಷ್ಠ ಅನ್ನದಾತನನ್ನು ಕಳಕೊಂಡಿದ್ದಾರೆ. ಕುಮಾರ ಪರ್ವತ ತನ್ನ ರಾಜನನ್ನು ಕಳಕೊಂಡು ಬರಿದಾಗಿದೆ ಎಂಬುದು ನಿಜ. ಈ ಕಲಿಯುಗದಲ್ಲಿ ಒಳ್ಳೆಯವರು ಸಿಗುವುದೇ ಕಷ್ಟ ಅಂತಹದರಲ್ಲಿ ನಮ್ಮ ಪ್ರೀತಿಯ ಭಟ್ಟರನ್ನು ಕಳೆದಕೊಂಡದು ಚಾರಣ ಪ್ರಿಯರಿಗೆ ದಿಗಿಲುಬಡಿದಂತಾಗಿದೆ ಎಂಬುದು ಮಾತು.

RELATED ARTICLES

LEAVE A REPLY

Please enter your comment!
Please enter your name here

Most Popular