ಕಾರ್ಕಳ : ಶಂಕಿತ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉಣ್ಣಿಮ್ಮಾಯಿಯನ್ನು ಕಾರ್ಕಳ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನಂತರ ನ್ಯಾಯಾಲಯ ಆಕೆಯನ್ನು ಫೆಬ್ರವರಿ 17ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕಾರ್ಕಳದಲ್ಲಿ ಒಂದು ಪ್ರಕರಣ ಎದುರಿಸುತ್ತಿರುವ ಶ್ರೀಮತಿಯನ್ನು ಸ್ಥಳೀಯ ಪೊಲೀಸರು ಬಾಡಿ ವಾರೆಂಟ್ ಪಡೆದುಕೊಂಡು ಕೇರಳದಿಂದ ಕಾರ್ಕಳಕ್ಕೆ ಕರೆತಂದಿದ್ದರು.
2011ರ ನ.19ರಂದು ಹೆಬ್ರಿಯ ಕಬ್ಬಿನಾಲೆಯ ಸದಾಶಿವಗೌಡ ಎಂಬುವವರನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯನ್ನು ವಿಚಾರಣೆ ನಡೆಸಲಾಗುತ್ತಿದೆ.
ಗುರುವಾರ ಶ್ರೀಮತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಸಿಪಿಐ ಮಾವೋ ಜಿಂದಾಬಾದ್ ಎಂದು ಘೋಷಣೆ ಕೂಗಿದರು.
ಕೇರಳ ಮತ್ತು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ವರದಿಗಾಗಿ ಆಕೆಯನ್ನು ನವೆಂಬರ್ 2023 ರಲ್ಲಿ ವಯನಾಡ್ ಕಣ್ಣೂರಿನಲ್ಲಿ ಬಂಧಿಸಲಾಯಿತು. ಶೃಂಗೇರಿಯ ಬೇಗಾರ ಗ್ರಾಮದ ಬೆಳಗೋಡುಕೊಡಿಗೆಯ ಪುಟ್ಟುಗೌಡ ಮತ್ತು ಗಿರಿಜಾ ದಂಪತಿಯ ಪುತ್ರಿ ಶ್ರೀಮತಿ 2007 ರಿಂದ ನಕ್ಸಲ್ ಚಳವಳಿಯಲ್ಲಿ ಸಕ್ರಿಯರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಥೊಳ್ಳಿಯಲ್ಲಿ ಪೊಲೀಸ್ ಎನ್ಕೌಂಟರ್ ಮತ್ತು ತಣಿಕೋಡು ಅರಣ್ಯ ಇಲಾಖೆ ಚೆಕ್ಪೋಸ್ಟ್ನ ತಪಾಸಣಾ ಕೊಠಡಿಯನ್ನು ಧ್ವಂಸಗೊಳಿಸಿದ ಪ್ರಕರಣ ಸೇರಿದಂತೆ ಆಕೆಯ ವಿರುದ್ಧ 15 ಕ್ಕೂ ಹೆಚ್ಚು ಪ್ರಕರಣಗಳಿವೆ.


