Thursday, March 12, 2026
Flats for sale
Homeಜಿಲ್ಲೆಮಂಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗುವಿನ ಜೊತೆ ಗುರುಪುರ ಸೇತುವೆ ಮೇಲಿಂದ ಆತ್ಮಹತ್ಯೆಗೆ ಯತ್ನ,ಸಿನಿಮೀಯ...

ಮಂಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗುವಿನ ಜೊತೆ ಗುರುಪುರ ಸೇತುವೆ ಮೇಲಿಂದ ಆತ್ಮಹತ್ಯೆಗೆ ಯತ್ನ,ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ವಾಹನಸವಾರರು ..!

ಮಂಗಳೂರು : ಕೌಟುಂಬಿಕ ಕಲಹ ಕ್ಕೆ ಬೇಸತ್ತು ಗುರುಪುರ ಸೇತುವೆ ಮೇಲಿಂದ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೈಕಂಬ ನಿವಾಸಿ ಸಂದೀಪ್ ಎಂದು ತಿಳಿದುಬಂದಿದೆ. ಸೇತುವೆಯ ತುದಿಭಾಗದಲ್ಲಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆಹಿಡಿದು ರಕ್ಷಿಸಿ ಥಳಿಸಿದ್ದಾರೆ.

ಕಔಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದಿದೆ. ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular