Saturday, January 17, 2026
Flats for sale
Homeರಾಜ್ಯಬೆಂಗಳೂರು : ಹೊಸ ವರ್ಷದಲ್ಲಿ ಬಹುದಿನಗಳಿಂದ ಕಾಯುತ್ತಿದ್ದ ಹೊಸ ಪಡಿತರ ಚೀಟಿಗೆ ಅರ್ಜಿ ಸ್ವೀಕರಿಸಲು ಪ್ರಾರಂಭ..!

ಬೆಂಗಳೂರು : ಹೊಸ ವರ್ಷದಲ್ಲಿ ಬಹುದಿನಗಳಿಂದ ಕಾಯುತ್ತಿದ್ದ ಹೊಸ ಪಡಿತರ ಚೀಟಿಗೆ ಅರ್ಜಿ ಸ್ವೀಕರಿಸಲು ಪ್ರಾರಂಭ..!

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಸಾವಿರಾರು ಮಂದಿ ಕಾಯುತ್ತಿದ್ದಾರೆ. ಇದಕ್ಕಾಗಿ ಸರ್ಕಾರ ಶೀಘ್ರವೇ ಹೊಸ ಪಡಿತರ ಚೀಟಿಗೆ ಅರ್ಜಿ ಸ್ವೀಕರಿಸಲು ತೀರ್ಮಾನಿಸಿದೆ.

ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸ್ವೀಕರಿಸಲು ಶೀಘ್ರವೇ ಅನ್‌ಲೈನ್ ವ್ಯವಸ್ಥೆ ಪ್ರಾರಂಭಿಸಲಿದೆ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಕರ್ನಾಟಕ ರಾಜ್ಯದ ಎಲ್ಲಾ ಕಾಯಂ ನಿವಾಸಿಗಳು ಈಗ ಅಧಿಕೃತ ahara.kar.nic.in ವೆಬ್ ಸೈಟ್‌ಗೆ ಭೇಟಿ ನೀಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಆನ್ ಲೈನ್ ವ್ಯವಸ್ಥೆಯ ಸಹಾಯದಿಂದ ಅರ್ಜಿ ದಾರರು ಮತ್ತು ಸರ್ಕಾರ ಇಬ್ಬರೂ ಸಾಕಷ್ಟು ಸಮಯ ಮತ್ತುಶ್ರಮವನ್ನು ಉಳಿಸಬಹುದು.

ಕರ್ನಾಟಕ ರಾಜ್ಯದ ಕಾಯಂ ನಿವಾಸಿಗಳು ಮಾತ್ರ ಕರ್ನಾಟಕ ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಆಹಾರ ಇಲಾಖೆ ತಿಳಿಸಿದೆ. ಆನ್ ಲೈನ್‌ನಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು
ಮಾತ್ರವಲ್ಲದೆ ಕರ್ನಾ ಟಕ ರಾಜ್ಯದ ನಾಗರಿಕರು ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬಹುದು ಮತ್ತು ಇ-ಪಡಿತರ ಚೀಟಿಯನ್ನು ಡೌನ್ ಲೋಡ್ ಮಾಡಬಹುದು. ಇ-ಪಡಿತರ ಚೀಟಿಯನ್ನೇ ಬಳಕೆ ಮಾಡಬಹುದು.

ಯಾವುದಕ್ಕೆ ಅರ್ಜಿ ಸಲ್ಲಿಸಬಹುದು?

ಆದ್ಯತಾ ಕುಟುಂಬ (ಪಿಎಚ್‌ಎಚ್) ಪಡಿತರ ಚೀಟಿ ಇದು ಕರ್ನಾಟಕದ ಗ್ರಾಮೀಣ ಪ್ರದೇಶ ಗಳಲ್ಲಿ ವಾಸಿಸುವ ಕುಟುಂಬಗಳಿಗೆ ನೀಡಲಾಗುವ ಒಂದು ರೀತಿಯ ಪಡಿತರ ಚೀಟಿಯಾಗಿದೆ. ಅರ್ಹ ಕುಟುಂಬಗಳಿಗೆ ಮಾಸಿಕ ಆಧಾರದ ಮೇಲೆ ಸಬ್ಸಿಡಿ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತದೆ.

ಅನ್ನಪೂರ್ಣ ಯೋಜನೆ ಪಡಿತರ ಚೀಟಿ

ಅನ್ನಪೂರ್ಣ ಯೋಜನೆ ಪಡಿತರ ಚೀಟಿ ಭಾರತದ ಸರ್ಕಾರಿ ಕಾರ್ಯಕ್ರಮವಾಗಿದ್ದು, ಇದು 65 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ದೀನದಲಿತ ನಾಗರಿಕರಿಗೆ ಸಹಾಯವನ್ನು ಒದಗಿಸುತ್ತದೆ. ಈ ಕಾರ್ಯಕ್ರಮವು ಅರ್ಹ ವ್ಯಕ್ತಿಗಳಿಗೆ ಮಾಸಿಕ ಆಧಾರದ ಮೇಲೆ ಆಹಾರ ಧಾನ್ಯಗಳನ್ನು ಒದಗಿಸುತ್ತದೆ. ಕಾರ್ಡುದಾರರು ತಿಂಗಳಿಗೆ 10 ಕಿಲೋಗ್ರಾಂಗಳಷ್ಟು ಆಹಾರ ಧಾನ್ಯಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ

ಅಂತ್ಯೋದಯ ಅನ್ನ ಯೋಜನೆ (ಎಎವೈ) ಪಡಿತರ ಚೀಟಿ ಭಾರತದ ಸರ್ಕಾರದ ಉಪಕ್ರಮವಾಗಿದ್ದು, ಇದು ದೇಶದ ಬಡ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ವಾರ್ಷಿಕ ಆದಾಯ 15,೦೦೦ ರೂ. ಗಿಂತ ಕಡಿಮೆ ಇರುವ ಕುಟುಂಬಗಳಿಗೆ ಈ ಚೀಟಿ ಸಿಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

Most Popular