ಮಂಗಳೂರು ; ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಜೆಟ್ಟಿ ಬಳಿ ನಡೆದಿದೆ.
ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿಯ ಶಿವಲಿಂಗ ಎಂಬವರ ಪುತ್ರ ಮಂಜುನಾಥ್,ಶಿವಮೊಗ್ಗ ಜಿಲ್ಲೆಯ ಜೆ.ಪಿ ನಗರದ ಶಿವಕುಮಾರ್, ಹಾಗೂ ಬಿದರ್ ಜಿಲ್ಲೆಯ ಹಂಗಾರಗಾ ನಿವಾಸಿ ವಿಶ್ವಂಬರ ಎಂದು ತಿಳಿದುಬಂದಿದೆ.
ಸುರತ್ಕಲ್ ಕಡಲ ಕಿನಾರೆಗೆ ತಿರುಗಾಡಲು ಬಂದಿದ್ದ ನಾಲ್ಕು ಯುವಕರ ಪೈಕಿ ಮೂವರು ನೀರುಪಾಲಾಗಿದ್ದು ಒರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆಂದು ತಿಳಿದುಬಂದಿದೆ. ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


