Saturday, July 18, 2026
Homeಜಿಲ್ಲೆಪುತ್ತೂರು ; ದಂಪತಿಗೆ ತಲವಾರು ತೋರಿಸಿ ಜೀವ ಬೆದರಿಕೆ ,ಬಿಜೆಪಿ ಮುಖಂಡನ ವಿರುದ್ದ ಪ್ರಕರಣ ದಾಖಲು…!

ಪುತ್ತೂರು ; ದಂಪತಿಗೆ ತಲವಾರು ತೋರಿಸಿ ಜೀವ ಬೆದರಿಕೆ ,ಬಿಜೆಪಿ ಮುಖಂಡನ ವಿರುದ್ದ ಪ್ರಕರಣ ದಾಖಲು…!

ಪುತ್ತೂರು ; ಬಿಜೆಪಿ ಮುಖಂಡ ಹಿಂದೂ ಸಂಘಟನೆಯ ಮುರಳಿಕೃಷ್ಣ ಹಸಂತಡ್ಕ ಹಿಂದೂ ದಂಪತಿಗೆ ತಲವಾರು ಹಿಡಿದು ಬೆದರಿಕೆಯೊಡ್ಡಿದ ಪ್ರಕರಣ ವಿಟ್ಲ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ.

ಬಂಟ್ವಾಳ ತಾಲೂಕಿನ ಹರೀಶ್ ಅವರು ನೀಡಿದ ದೂರಿನಂತೆ, ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿಯೊಬ್ಬಳೇ ಇದ್ದ ಸಮಯದಲ್ಲಿ ಮನೆಗೆ ಬಂದಿದ್ದ ಹಸಂತಡ್ಕ, “ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಪಂಪ್ ಬಿಟ್ಟು ಕೊಡುವಂತೆ ಹೇಳು” ಎಂದು ಹರೀಶ್ ಪತ್ನಿ ಶ್ರೀದೇವಿ ಅವರಿಗೆ ಬೆದರಿಕೆಯೊಡ್ಡಿದ್ದಾಗಿ ಹೇಳಲಾಗಿದೆ. ಅಷ್ಟೇ ಅಲ್ಲದೇ, ಎಪ್ರಿಲ್ 19 ರಂದು ಮತ್ತೊಮ್ಮೆ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ತಲ್ವಾರ್ ಹಿಡಿದುಕೊಂಡು ಬಂದು ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ. ಈ ಕುರಿತು ನ್ಯಾಯಾಲಯದ ಆದೇಶದಂತೆ ವಿಟ್ಲ ಠಾಣೆಯಲ್ಲಿ ಬಿಜೆಪಿ ಮುಖಂಡ ಮುರಳೀಕೃಷ್ಣ ಹಸಂತಡ್ಕ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಹರೀಶ್ ಪತ್ನಿ ಶ್ರೀದೇವಿ ಹಾಗೂ ಮುರಳೀಕೃಷ್ಣ ಹಸಂತಡ್ಕ ಸಾರಡ್ಕದ HP ಪೆಟ್ರೋಲ್ ಪಂಪ್‌ನಲ್ಲಿ ಪಾಲುದಾರಿಕೆ ಹೊಂದಿದ್ದು, ಇದೇ ವಿಚಾರವಾಗಿ ಬೆದರಿಕೆಯೊಡ್ಡಿರುವುದಾಗಿ ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular