Thursday, March 12, 2026
Flats for sale
Homeವಿದೇಶಮೈಸೂರು : ಅಮೆರಿಕದದಲ್ಲಿ ಮಂಡ್ಯ ಮೂಲದ ಉದ್ಯಮಿ ಪತ್ನಿ,ಪುತ್ರನನ್ನು ಕೊಂದು ಗುಂಡಿಕ್ಕಿ ಆತ್ಮಹತ್ಯೆ…!

ಮೈಸೂರು : ಅಮೆರಿಕದದಲ್ಲಿ ಮಂಡ್ಯ ಮೂಲದ ಉದ್ಯಮಿ ಪತ್ನಿ,ಪುತ್ರನನ್ನು ಕೊಂದು ಗುಂಡಿಕ್ಕಿ ಆತ್ಮಹತ್ಯೆ…!

ಮೈಸೂರು : ಅಮೆರಿಕಾದಲ್ಲಿ ಮಂಡ್ಯ ಕೆಆರ್ ಪೇಟೆ ಮೂಲದ ಉದ್ಯಮಿ ಹರ್ಷವರ್ಧನ ಕಿಕ್ಕೇರಿ (57) ವಾಷಿಂ‌ಗ್ಟನ್ ಸಮೀಪದ ನ್ಯೂ ಕ್ಯಾಸೆಲ್‌ ನಗರದ ತಮ್ಮ ನಿವಾಸದಲ್ಲಿ ಪತ್ನಿ ಶ್ವೇತಾ ಹಾಗೂ ಪುತ್ರನಿಗೆ ಗುಂಡಿಕ್ಕಿ, ಬಳಿಕ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ವರದಿಯಾಗಿದೆ.

ಹರ್ಷ ತಮ್ಮ ಪತ್ನಿ ಶ್ವೇತಾ, ಇಬ್ಬರು ಪುತ್ರರೊಂದಿಗೆ ಅಮೆರಿಕದ ನ್ಯೂ ಕ್ಯಾಸಲ್‌ನಲ್ಲಿ ವಾಸವಿದ್ದರು. ಗುರುವಾರ ರಾತ್ರಿ ಹರ್ಷ, ಪತ್ನಿ ಹಾಗೂ ಹಿರಿಯ ಪುತ್ರನಿಗೆ ಗುಂಡಿಕ್ಕಿ, ನಂತರ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವೇಳೆ ಏಳು ವರ್ಷದ ಕಿರಿಯ ಪುತ್ರ ಮನೆಯಿಂದ ಹೊರಹೋಗಿದ್ದರಿಂದ ಎಂಬುದು ತಿಳಿದುಬಂದಿದೆ. ಬದುಕುಳಿದಿದ್ದಾನೆ.

ಭಾಷಾತಜ್ಞ ಕಿಕ್ಕೇರಿ ನಾರಾಯಣ್‌ ಅವರ ಪುತ್ರ ಹರ್ಷವರ್ಧನ ಅವರ ತಾಯಿ ಗಿರಿಜಾ ನಾರಾಯಣ್‌. ಸಹೋದರ ಚೇತನ್. ಭಾಷಾತಜ್ಞ ಕಿಕ್ಕೇರಿ ನಾರಾಯಣ್‌ 2017ರಲ್ಲಿ ಮೃತಪಟ್ಟಿದ್ದರು. ಈಗ ತಾಯಿ ಗಿರಿಜಾ ಚೇತನ್ ಅವರೊಂದಿಗೆ ಮೈಸೂರು ವಿಜಯನಗರದಲ್ಲಿ ವಾಸವಿದ್ದಾರೆ. ಹರ್ಷವರ್ಧನ ಹಾಗೂ ಚೇತನ್ ಇಬ್ಬರೂ ಚೆಸ್‌ ಆಟಗಾರರಾಗಿದ್ದರು. ಮಂಡ್ಯದ ಕೆ.ಆರ್‌.ಪೇಟೆ ತಾಲ್ಲೂಕಿನ ಕಿಕ್ಕೇರಿ ಮೂಲದವರಾದ ಹರ್ಷವರ್ಧನ್‌, ಮೈಸೂರು ನಗರದ ಎಸ್‌ಜೆಸಿಇ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ನಂತರ ಮೈಕ್ರೋಸಾಫ್ಟ್‌ ಉದ್ಯೋಗಿಯಾಗಿದ್ದರು.

ರೊಬೋಟಿಕ್ಸ್ ವಿಚಾರದಲ್ಲಿ ಪರಿಣತಿ ಹೊಂದಿದ್ದ ಹರ್ಷವರ್ಧನ ಕಿಕ್ಕೇರಿ ಅವರು ಕರ್ನಾಟಕದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರು. ನವೋದ್ಯಮ ಸ್ಥಾಪಿಸಲು ವಿದ್ಯಾರ್ಥಿಗಳನ್ನು ಉತ್ತೇಜಿಸುತ್ತಿದ್ದರು. ಮೈಸೂರು ನಗರದ ಎನ್‌ಐಇ, ಎಸ್‌ಜೆಸಿಇ ಕಾಲೇಜುಗಳು ಹಾಗೂ ಸಿಎಫ್‌ಟಿಆರ್‌ಐ ಕಾರ್ಯಕ್ರಮ, ತಂತ್ರಜ್ಞಾನ ಸಮಾವೇಶಗಳಲ್ಲಿ ಕೂಡ ಅವರು ಪಾಲ್ಗೊಂಡಿದ್ದರು.

ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿನಿಂದ (ಎಸ್‌ಜೆಸಿಇ) ಎಂಜಿನಿಯರಿಂಗ್ ಪದವಿ ಪಡೆದರು. ನಂತರ ಅವರು ಯುನೈಟೆಡ್ ಸ್ಟೇಟ್ಸ್ (ಯುಎಸ್) ನ ಮೈಕ್ರೋಸಾಫ್ಟ್‌ನಲ್ಲಿ ಹಲವಾರು ವರ್ಷಗಳ ಕಾಲ ಕೆಲಸ ಮಾಡಿದರು, ಅಲ್ಲಿ ಅವರು ರೋಬೋಟ್‌ಗಳನ್ನು ನಿರ್ಮಿಸುವಲ್ಲಿ ತೊಡಗಿಸಿಕೊಂಡಿದ್ದರು.

2017 ರಲ್ಲಿ ಭಾರತಕ್ಕೆ ಹಿಂದಿರುಗಿದ ನಂತರ, ಹರ್ಷ ಮತ್ತು ಅವರ ಪತ್ನಿ ಶ್ವೇತಾ ಮೈಸೂರಿನಲ್ಲಿ ‘ಹೋಲೋವರ್ಲ್ಡ್’ ಎಂಬ ರೊಬೊಟಿಕ್ಸ್ ಸ್ಟಾರ್ಟ್-ಅಪ್ ಅನ್ನು ಸ್ಥಾಪಿಸಿದರು. 2018 ರಲ್ಲಿ, ಕಂಪನಿಯು ‘ಹೋಲೋಸೂಟ್’ ಅನ್ನು ಅಭಿವೃದ್ಧಿಪಡಿಸಿತು, ಇದು ವಿಶ್ವದ ಮೊದಲ ಕೈಗೆಟುಕುವ, ಹಗುರವಾದ, ದ್ವಿಮುಖ, ವೈರ್‌ಲೆಸ್ ಪೂರ್ಣ-ದೇಹದ ಮೋಷನ್ ಕ್ಯಾಪ್ಚರ್ ಸೂಟ್ ಆಗಿದ್ದು, ಕ್ರೀಡೆ, ಆರೋಗ್ಯ ರಕ್ಷಣೆ, ಶಿಕ್ಷಣ, ಮನರಂಜನೆ ಮತ್ತು ಕೌಶಲ್ಯ ಅಭಿವೃದ್ಧಿಯಂತಹ ಕೈಗಾರಿಕೆಗಳಿಗೆ ಸೇವೆ ಸಲ್ಲಿಸುತ್ತದೆ.

ಶ್ವೇತಾ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದರೆ, ಹರ್ಷ ಸಿಇಒ ಆಗಿದ್ದರು. ಕಂಪನಿಯ ಉತ್ಪನ್ನಗಳು ಅಂತರರಾಷ್ಟ್ರೀಯ ಬೇಡಿಕೆಯನ್ನು ಗಳಿಸಿದವು, ಯುಎಸ್, ಯುಕೆ ಮತ್ತು ಇಸ್ರೇಲ್‌ಗೆ ರಫ್ತು ಮಾಡಲಾಯಿತು. ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಹೋಲೋವರ್ಲ್ಡ್‌ನ ಬ್ರಾಂಡ್ ರಾಯಭಾರಿಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular