Tuesday, October 21, 2025
Flats for sale
Homeರಾಜ್ಯಮೈಸೂರು : ಪ್ರಯತ್ನ ವಿಫಲವಾದರು ಪ್ರಾರ್ಥನೆ ವಿಫಲವಾಗದು : ಚಾಮುಂಡಿ ಬೆಟ್ಟದಲ್ಲಿ ಡಿ.ಕೆ ಶಿವಕುಮಾರ್..!

ಮೈಸೂರು : ಪ್ರಯತ್ನ ವಿಫಲವಾದರು ಪ್ರಾರ್ಥನೆ ವಿಫಲವಾಗದು : ಚಾಮುಂಡಿ ಬೆಟ್ಟದಲ್ಲಿ ಡಿ.ಕೆ ಶಿವಕುಮಾರ್..!

ಮೈಸೂರು : ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಮಿವಾಗಿ ಹೇಳಿದ್ದಾರೆ. ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ದುಃಖವನ್ನು ದೂರ ಮಾಡುವ ಶಕ್ತಿ ದೇವಿ ಚಾಮುಂಡಿಗೆ ಇದೆ. ಈ ಬಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದು ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ. ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತೆ ಎಂಬ ನಂಬಿಕೆ ಇದೆ. ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ. ಇಂದು ಕುಟುAಬ ಸಮೇತ ಪೂಜೆ ತಾಯಿಗೆ ಪೂಜೆ ಸಲ್ಲಿಸಿದ್ದೇನೆ ನನಗೆ ಏನು ಬೇಕು ಅದನ್ನ ಪ್ರಾರ್ಥನೆ ಮಾಡಿದ್ದೇನೆ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಹೇಳಿದರು.

ಯಾವ ಚರ್ಚೆನೂ ಬೇಡ ಈಗ: ಸಿಎಂ ರೇಸ್ ನಿಂದ ಡಿ.ಕೆ ಶಿವಕುಮಾರ್ ಹೊರ ಬಿದ್ದಿರೆ ಎಂಬ ಪ್ರಶ್ನೆಗೆ ಮಾರ್ಮಿಕ ಉತ್ತರ ನೀಡಿದ ಡಿಸಿಎಂ. ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು ಹಾಗೂ ಹಿರಿಯರು. ಅವರು ಬುದ್ಧಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular