ತುಮಕೂರು : ದಾವಣಗೆರೆಯ ಸಬ್ ಇನ್ಸ್ಪೆಕ್ಟರ್ ತುಮಕೂರಿನಲ್ಲಿ ಆತ್ಮಹತ್ಯೆಮಾಡಿಕೊಂಡ ಘಟನೆ ವರದಿಯಾಗಿದೆ , ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜು ತುಮಕೂರಿನ ದ್ವಾರಕ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸಬ್ ಇನ್ಸ್ಪೆಕ್ಟರ್ ಎಂದು ತಿಳಿದುಬಂದಿದೆ.
ನಾಲ್ಕು ದಿನಗಳ ಹಿಂದೆ ಪಿಎಸ್ಐ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆಂದು ತಿಳಿದುಬಂದಿದೆ.
ನನ್ನ ಸಾವಿಗೆ ಕೌಟುಂಬಿಕ ಕಲಹವೇ ಕಾರಣ, ನನ್ನ ಕೆಲಸ ಮಗನಿಗೆ ನೀಡುವಂತೆ ಡೆತ್ ನೋಟ್ ನಲ್ಲಿ ಮನವಿಮಾಡಿದ್ದಾರೆ.ಇನ್ನು, ನಾಗರಾಜ್ನ ಮೃತ ದೇಹವನ್ನ ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದು ತುಮಕೂರು ನಗರ ಠಾಣೆಯ ಇನ್ಸ್ಪೆಕ್ಟರ್ ಅವಿನಾಶ್ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.


