Wednesday, November 5, 2025
Flats for sale
Homeಜಿಲ್ಲೆಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣ : ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​…!

ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣ : ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​…!

ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಪ್ರಕರಣದ ಆಳಕ್ಕೆ ಇಳಿದ ಎಸ್ಐಟಿ ಬುರುಡೆ ಮ್ಯಾನ್​ನಿಂದ ಹಿಡಿದು ಅನನ್ಯಾ ಭಟ್​ವರೆಗೂ ಸಂಚು ನಡೆದಿರುವುದು ಎಸ್​ಐಟಿ ತನಿಖೆಯಲ್ಲಿ ಇಂಚಿಂಚು ಬಯಲಾಗುತ್ತಿದೆ.

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್​​ನನ್ನು ಎಸ್ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​ ನಿಡಿದೆ.

ಮನಾಫ್ ಶಿರೂರ್ ನಲ್ಲಿ ಗುಡ್ಡ ಕುಸಿತದಲ್ಲಿ ಕಾಣೆಯಾಗಿದ್ದ ಲಾರಿಯ ಮಾಲೀಕ. 2024 ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಇದೇ ಘಟನೆಯಲ್ಲಿ ಲಾರಿ ಚಾಲಕ ಅರ್ಜುನ್ ಮೃತಪಟ್ಟಿದ್ದ. ಬಳಿಕ ಈತ ಯೂಟ್ಯೂಬ್ ಚಾನೆಲ್ ಮಾಡಿ ಲಾರಿ ಚಾಲಕನ ಉಳಿವಿಗಾಗಿ ೧ ತಿಂಗಳ ವರೆಗೆ ಶಿರೂರಿನಲ್ಲೇ ಬೀಡುಬಿಟ್ಟಿದ್ದು ಯೂಟ್ಯೂಬ್ ಮೂಲಕ ಹಣ ಗಿಟ್ಟಿಸಿಕೊಂಡಿದ್ದ.ಬಳಿಕ ಧರ್ಮಸ್ಥಳದ ವಿಡಿಯೋ ಕೇರಳದಲ್ಲಿ ಹರಿಯಬಿಟ್ಟಿದ್ದ.

RELATED ARTICLES

LEAVE A REPLY

Please enter your comment!
Please enter your name here

Most Popular