ಪುತ್ತೂರು : ನಗರದ ಬಸ್ ನಿಲ್ದಾಣದ ಬಳಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ (ಸಿಎಂ) ಸದಾನಂದ ಗೌಡ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವಿರುವ ಪೋಸ್ಟರ್ಗೆ ಪಾದರಕ್ಷೆಗಳಿಂದ ಹಾರ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆಯಲಾಗಿದೆ.
‘ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅವಮಾನಕರ ಸೋಲಿಗೆ ಕಾರಣರಾದ ನಿಮ್ಮಿಬ್ಬರಿಗೂ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬ್ಯಾನರ್ನಲ್ಲಿ ಬರೆಯಲಾಗಿದೆ. ಅದರ ಕೆಳಭಾಗದಲ್ಲಿ ‘ನೋವಿನ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.
ಇದು ನೂರಾರು ಹಿಂದೂ ಕಾರ್ಯಕರ್ತ ರ ಅಕ್ರೋಶಕ್ಕೆ ಕಾರಣವಾಗಿದ್ದು,ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


