Saturday, July 25, 2026
Homeಜಿಲ್ಲೆಮಂಗಳೂರು : ಸೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಪ್ರಕರಣ,ಜುಲೈ 31 ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ.

ಮಂಗಳೂರು : ಸೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಪ್ರಕರಣ,ಜುಲೈ 31 ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ.

ಮಂಗಳೂರು : ಉಡುಪಿಯ ಕಾಲೇಜೊಂದರ ವಾಶ್ ರೂಂನಲ್ಲಿ ವಿದ್ಯಾರ್ಥಿಯೊಬ್ಬ ಮೊಬೈಲ್ ಫೋನ್ ಇಟ್ಟು ಚಿತ್ರೀಕರಿಸಿದ ಘಟನೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜುಲೈ 31ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.

ಜುಲೈ 27, ಗುರುವಾರ ಇಲ್ಲಿ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಘಟನೆ ನಡೆದು ಹಲವು ದಿನಗಳ ನಂತರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಉಡುಪಿ ಎಸ್ಪಿ ವಿರುದ್ಧವೂ ಟೀಕೆ ಮಾಡುತ್ತಿದ್ದು, ಎಸ್ಪಿ ಮೂರ್ಖ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಪ್ರಕರಣದಲ್ಲಿ ಪೊಲೀಸರು ತ್ವರಿತವಾಗಿ ಎಫ್‌ಐಆರ್ ದಾಖಲಿಸಲು ವಿಫಲರಾಗಿದ್ದಾರೆ, ಘಟನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದರು.

ಮಂಗಳೂರು ಉತ್ತರ ಶಾಸಕ ವೇದವ್ಯಾಸ್ ಕಾಮತ್, ಮುಡಾ ಮಾಜಿ ಮುಖ್ಯಸ್ಥ ರವಿಶಂಕರ್ ಮಿಜಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular