Monday, March 16, 2026
Flats for sale
Homeಜಿಲ್ಲೆಪುತ್ತೂರು : ಚಂದ್ರಯಾನ ಯಶಸ್ವಿಗಾಗಿ ಹಾಗೂ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದರ ಗೆಲುವಿಗಾಗಿ ಪುತ್ತಿಲ...

ಪುತ್ತೂರು : ಚಂದ್ರಯಾನ ಯಶಸ್ವಿಗಾಗಿ ಹಾಗೂ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದರ ಗೆಲುವಿಗಾಗಿ ಪುತ್ತಿಲ ಪರಿವಾರದಿಂದ ವಿಶೇಷ ಪ್ರಾರ್ಥನೆ.

ಪುತ್ತೂರು : ದೇಶದ ಉನ್ನತಿಗಾಗಿ ಭಾರತದ ಪಾಲಿಗೆ ಎರಡು ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿರುವ ಕ್ಷಣಗಳಾದ 18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್ ರ್ಯಾಂಕಿನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟ ನಡೆಯಲಿದ್ದು,ಚಂದ್ರಯಾನ ಯಶಸ್ವಿಗಾಗಿ ಪುತ್ತಿಲ ಪರಿವಾರದಿಂದವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈಗಾಗಲೇ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಭಾರತ ಆಗಿದ್ದು ಇಂದು ಸಂಜೆ 6 ಸಮಯಕ್ಕೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ಮೂಲಕ ನಮ್ಮ ಭಾರತ ಇತಿಹಾಸ ಬರೆಯಲಿದೆ. ಈ ಎರಡು ಕ್ಷಣಗಳಲ್ಲಿ ಭಾರತಕ್ಕೆ ಗೆಲುವು ಸಿಗಲೆಂದು ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತಿಲ ಪರಿವಾರದ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವಿಶ್ವವೇ ಭಾರತದ ಸಾಧನೆಗೆ ಕಣ್ಣೆತ್ತಿ ನೋಡುತ್ತಿದೆ. ಪ್ರಜ್ಞಾನಂದರಿಗೆ ಹಾಗೂ ಚಂದ್ರಯಾನ ಯಶಸ್ವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ನಗರ ಅಧ್ಯಕ್ಷರಾದ ಅನಿಲ್ ತೆಂಕಿಲ, ರಾಜ್ ಶೆಟ್ಟಿ , ಪ್ರವೀಣ್ ಭಂಡಾರಿ, ರವಿ ಶೆಟ್ಟಿ, ಪ್ರಕಾಶ್, ಶನ್ಮಿತ್, ಮನೀಶ್ ಬನ್ನೂರು, ದಯಾನಂದ ರೈ ಪ್ರಾರ್ಥನೆ ಸಂದರ್ಭ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular