ಮಂಗಳೂರು : ನಗರದ ಪ್ರತಿಷ್ಠಿತ ಹೋಟೆಲ್ ಮೋತಿಮಹಲ್ ನ ಈಜುಕೊಳದಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಪಾರ್ಥಿವ ಶರೀರ ಪತ್ತೆಯಾಗಿದೆ ಎಂದು ಇಲ್ಲಿನ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಕೇರಳದ ತಿರುವನಂತಪುರಂ ಮೂಲದ ಗೋಪು ಆರ್ ನಾಯರ್ ಮೃತರು. ಭಾನುವಾರ ನಗರಕ್ಕೆ ಬಂದಿದ್ದ ಅವರು ಹೋಟೆಲ್ನಲ್ಲಿ ತಂಗಿದ್ದರು. ಸಂಜೆ 4 ಗಂಟೆ ಸುಮಾರಿಗೆ ಅವರು ತಮ್ಮ ಕೊಠಡಿಯಿಂದ ಹೊರಗೆ ಬಂದಿದ್ದರು. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


