Wednesday, November 5, 2025
Flats for sale
Homeಜಿಲ್ಲೆಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ,ಇಬ್ಬರ ಜೀವ ಉಳಿಸಿದ ಮರ.

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ,ಇಬ್ಬರ ಜೀವ ಉಳಿಸಿದ ಮರ.

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೆ ಬಾಟಲಿ ತುಂಬಿದ ಲಾರಿ ಪಲ್ಟಿಯಾದ ಘಟನೆ ವರದಿಯಾಗಿದೆ.

ಲಾರಿ ಪಲ್ಟಿಯಾಗುತ್ತಿದ್ದಂತೆ 100 ಅಡಿ ಪ್ರಪಾತದಲ್ಲಿ ಮರಕ್ಕೆ ಸಿಕ್ಕಿಕೊಂಡಿದ್ದು,ಪ್ರಪಾತದಲ್ಲಿ ಇದ್ದ ಮರ ಇಬ್ಬರ ಜೀವ ಉಳಿಸಿದೆ.

ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿ ಸಾಗಿಸುತ್ತಿದ್ದು ,ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಿಯರಿಂದ ಲಾರಿ ಚಾಲಕ-ಕ್ಲೀನರ್ ರಕ್ಷಣೆ ನಡೆದಿದ್ದು ,ಸ್ಥಳಕ್ಕೆ ಬಣಕಲ್ ಪೊಲೀಸರ ಭೇಟಿನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular