Sunday, March 15, 2026
Flats for sale
Homeಜಿಲ್ಲೆಕುಂದಾಪುರ: ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು.

ಕುಂದಾಪುರ: ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು.

ಕುಂದಾಪುರ : ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವಿದ್ಯುತ್ ತಂತಿ ತಗುಲಿ ದಂಪತಿ ಸಾವನ್ನಪ್ಪಿದ ಘಟನೆ ಕಟ್ಬೆಳ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಮ್ಮಾಡಿ ಸಮೀಪದ ಸುಳ್ಸೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮೃತರು ಮಹಾಬಲ ದೇವಾಡಿಗ (55) ಮತ್ತು ಅವರ ಪತ್ನಿ ಲಕ್ಷ್ಮಿ ದೇವಾಡಿಗ (48). ಮಹಾಬಲ ಕೂಲಿ ಕಾರ್ಮಿಕನಾಗಿದ್ದು, ಅನಂತ ಚತುರ್ದಶಿ ನಿಮಿತ್ತ ಸ್ವಚ್ಛತಾ ಕಾರ್ಯಕ್ಕಾಗಿ ಗ್ರಾಮದ ಮನೆಗೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
 
ಪತಿಯನ್ನು ಹುಡುಕಿಕೊಂಡು ಬಂದ ಲಕ್ಷ್ಮಿ ಅವರು ಅಲುಗಾಡದೇ ಬಿದ್ದಿರುವುದನ್ನು ಕಂಡು ತಕ್ಷಣ ಅಕ್ಕಪಕ್ಕದವರಿಗೆ ಮಾಹಿತಿ ನೀಡಿದ್ದಾರೆ. ಇತರರು ಹತ್ತಿರ ಹೋಗಬೇಡಿ ಎಂದು ಕೇಳಿಕೊಂಡರೂ, ಪತಿಯನ್ನು ರಕ್ಷಿಸುವ ಪ್ರಯತ್ನದಲ್ಲಿ ಅವಳು ಮುಂದೆ ಹೋದಳು ಮತ್ತು ವಿದ್ಯುತ್ ಆಘಾತಕ್ಕೊಳಗಾದಳು.

ಸ್ಥಳಕ್ಕೆ ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ ಡಿ ಗೌಡ, ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಸುಳ್ಸೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜ ಪುತ್ರನ್, ಶೇಖರ್ ಬಳೆಗಾರ, ಗಂಗೊಳ್ಳಿ ಜೆಇ ದಿನೇಶ್ ಶೆಟ್ಟಿ, ಸುಳ್ಸೆ ಗ್ರಾಮ ಪಂಚಾಯಿತಿ ಗ್ರಾಮ ಲೆಕ್ಕಾಧಿಕಾರಿ ಸೋಮಪ್ಪ, ಪೊಲೀಸ್ ಸಿಬ್ಬಂದಿ, ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿದರು.

ಈ ಘಟನೆ ಸಂಬಂಧ ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular