ಹಿರಿಯೂರು : ರಾತ್ರೋ ರಾತ್ರಿ ನಗರದಲ್ಲಿ ಸ್ಥಾಪಿಸಲಾಗಿದ್ದ ಮಹನೀಯರ ಪ್ರತಿಮೆಯನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ನಡೆದಿದೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ರಾಷ್ಟ್ರಕವಿ ಕುವೆಂಪು, ನಟ ಪುನೀತ್ ರಾಜ್ ಕುಮಾರ್ ಪ್ರತಿಮೆಗಳನ್ನು ಸ್ಥಾಪಿಸಲಾಗಿತ್ತು. ರಾಜ್ಯದ ಮಹನೀಯರ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಕರವೇ ಕಾರ್ಯಕರ್ತರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ
ರಂಜಿತಾ ಹೋಟಲ್ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಸ್ಥಾಪಿಸಿದ್ದರು.
ಸ್ಥಾಪಿಸಲಾಗಿದ್ದ ರಾತ್ರೋ ರಾತ್ರಿ ತೆರವುಗೊಳಿಸಿದ್ದಾರೆ.ನಗರದ ಇಂದಿರಾ ಕ್ಯಾಂಟೀನ್ ಮುಂಭಾಗ ಸ್ಥಾಪಿಸಿದ್ದ ಪುನೀತ್ ರಾಜಕುಮಾರ್ ಪ್ರತಿಮೆಯನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.


