Thursday, March 27, 2025
Flats for sale
Homeಜಿಲ್ಲೆಮಂಗಳೂರು: ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹೃದಯಾಘಾತದಿಂದ ಸಾವು !

ಮಂಗಳೂರು: ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹೃದಯಾಘಾತದಿಂದ ಸಾವು !

ಮಂಗಳೂರು : ಕಾವೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹನುಮಂತ ನಾಯ್ಕ ಅವರು ಡಿಸೆಂಬರ್ 15 ರ ಗುರುವಾರ ಬೆಳಿಗ್ಗೆ ತಮ್ಮ ತವರು ಬಾಗಲಕೋಟೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಆತ ಮೃತಪಟ್ಟಿದ್ದಾನೆ.

ಹನುಮಂತ 2008ರ ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು. ಇವರು ಈ ಹಿಂದೆ ಮುಲ್ಕಿ ಸಂಚಾರಿ ಉತ್ತರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು. ತಮ್ಮ ಸರಳತೆ, ಸಮಾಜ ಪರ ಕೆಲಸ, ಕರ್ತವ್ಯ ನಿಷ್ಠೆಯಿಂದ ಅಲ್ಪಾವಧಿಯಲ್ಲಿಯೇ ಪೊಲೀಸ್ ಇಲಾಖೆಯಲ್ಲಿ ಉತ್ತಮ ಹೆಸರು ಗಳಿಸಿದರು.

ಹನುಮಂತ ನಾಯ್ಕ ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular