Wednesday, October 22, 2025
Flats for sale
Homeಜಿಲ್ಲೆಮಂಗಳೂರು: ಜಲೀಲ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವನ ಬಂಧನ.

ಮಂಗಳೂರು: ಜಲೀಲ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವನ ಬಂಧನ.

ಮಂಗಳೂರು ಡಿ.27: ಮಂಗಳವಾರ ಡಿ.27ರಂದು ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬನನ್ನು ಬಂಧಿಸಲಾಗಿದೆ.

ಬಂಧಿತನನ್ನು ಕಾಟಿಪಳ್ಳ ನಿವಾಸಿ ಲಕ್ಷ್ಮೀಶ್ ದೇವಾಡಿಗ (28) ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ.

ಈ ಹಿಂದೆ ಕೃಷ್ಣಾಪುರದ ಶೈಲೇಶ್ ಪೂಜಾರಿ (21), ಹೆಜಮಾಡಿಯ ಸವಿನ್ ಕಾಂಚನ್ (24) ಮತ್ತು ಕಾಟಿಪಳ್ಳದ ಪವನ್ (23) ಎಂಬ ಮೂವರನ್ನು ಬಂಧಿಸಲಾಗಿತ್ತು. 2018 ರ ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪಿಂಕಿ ನವಾಜ್ ಕೊಲೆ ಯತ್ನ ಪ್ರಕರಣದಲ್ಲಿ ಶೈಲೇಶ್ ಮತ್ತು ಸವಿನ್ ಕೂಡ ಆರೋಪಿಗಳಾಗಿದ್ದಾರೆ.

ಫ್ಯಾನ್ಸಿ ಸ್ಟೋರ್ ಮಾಲೀಕ ಜಲೀಲ್ ಅವರನ್ನು ಡಿಸೆಂಬರ್ 24 ರಂದು ಸುರತ್ಕಲ್ ಬಳಿ ಅವರ ಅಂಗಡಿಯ ಬಳಿಯೇ ಕೊಲೆ ಮಾಡಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular