ಕಾಸರಗೋಡು : ಸ್ಕೂಟರ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆ ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಚಂದ್ರಗಿರಿ ಶಾಲೆಯ ಪ್ಲಸ್ ಒನ್ ವಿದ್ಯಾರ್ಥಿ ಅಶ್ಫಾಕ್ (18) ಎಂದು ಗುರುತಿಸಲಾಗಿದೆ.
ಬೇಕಲ ಮವ್ವಳ ನಿವಾಸಿ ಅಶ್ಫಾಕ್ ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಅಶ್ಫಾಕ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಕೊನೆಯುಸಿರೆಳೆದರು.