Friday, March 28, 2025
Flats for sale
Homeಜಿಲ್ಲೆಮಂಗಳೂರು: ಕೆಲಸದ ವೇಳೆ ಮೇಲ್ಛಾವಣಿಯಿಂದ ಬಿದ್ದು ಯುವಕ ಸಾವು.

ಮಂಗಳೂರು: ಕೆಲಸದ ವೇಳೆ ಮೇಲ್ಛಾವಣಿಯಿಂದ ಬಿದ್ದು ಯುವಕ ಸಾವು.

ಮಂಗಳೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದ ವರ್ಕ್‌ಶಾಪ್‌ನ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

ಮೃತರನ್ನು ಎಕ್ಕೂರುಗುಡ್ಡೆ ನಿವಾಸಿ ವರುಣ್ (25) ಎಂದು ಗುರುತಿಸಲಾಗಿದೆ.

ವರುಣ್ ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ನಲ್ಲಿ ಸೋಲಾರ್ ಪ್ಯಾನಲ್‌ಗೆ ವೈರಿಂಗ್ ಮತ್ತು ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ. ಶೀಟ್ ಹಠಾತ್ತನೆ ತುಂಡಾಗಿದ್ದು, ವರುಣ್ ನೆಲಕ್ಕೆ ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಗುತ್ತಿಗೆದಾರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಸುರಕ್ಷತಾ ನಿರ್ಲಕ್ಷ್ಯದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ವರುಣ್ ತಾಯಿ ಹಾಗೂ ಇಬ್ಬರು ಕಿರಿಯ ಸಹೋದರರನ್ನು ಅಗಲಿದ್ದಾರೆ. ಅವರ ಒಬ್ಬ ಕಿರಿಯ ಸಹೋದರ ಬೇಕರಿ ಕೆಲಸಕ್ಕೆ ಹೋಗುತ್ತಾನೆ ಮತ್ತು ಇನ್ನೊಬ್ಬ ಓದುತ್ತಿದ್ದಾನೆ. ವರುಣ್ ಎಕ್ಕೂರು ಬಿಜೆಪಿ ಬೂತ್ ಕಾರ್ಯದರ್ಶಿಯಾಗಿದ್ದರು.

ವರುಣನ ನಿಧನಕ್ಕೆ ಶಾಸಕ ವೇದವ್ಯಾಸ ಕಾಮತ್ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular