Wednesday, November 5, 2025
Flats for sale
Homeರಾಜ್ಯವಿಜಯಪುರ : ಪಂಚಭೂತಗಳಲ್ಲಿ ಸಿದ್ದೇಶ್ವರ ಸ್ವಾಮೀಜಿ ಲೀನ : ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ!

ವಿಜಯಪುರ : ಪಂಚಭೂತಗಳಲ್ಲಿ ಸಿದ್ದೇಶ್ವರ ಸ್ವಾಮೀಜಿ ಲೀನ : ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ!

ವಿಜಯಪುರ : ನೆನ್ನೆ ಇಹಲೋಕ ತ್ಯಜಿಸಿದ್ದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ಇಂದು ಆಶ್ರಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಶ್ರೀಗಳ ಇಚ್ಛೆಯಂತೆಯೇ ನೆರವೇರಿಸಲಾಯಿತು.

ಅಂತಿಮ ನಮನದ ನಂತರ ಅವರ ಪಾರ್ಥಿವ ಶರೀರವನ್ನು ವಿಜಯಪುರದ ಸೈನಿಕ ಶಾಲೆಯಿಂದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.

ಆಶ್ರಮದ ಆವರಣದಲ್ಲಿ ನಿರ್ಮಿಸಿದ್ದ ವೇದಿಕೆಯ ಮೇಲೆ ಶ್ರೀಗಳವರ ಪಾರ್ಥಿವ ಶರೀರವನ್ನಿರಿಸಿ ಆಶ್ರಮದ ಆವರಣದಲ್ಲಿ ಹಲವು ಮಠಾಧೀಶರ ನೇತೃತ್ವದಲ್ಲಿ ಅಂತ್ಯ ಸಂಸ್ಕಾರ ನಡೆಯಿತು.

ಶ್ರೀಗಳವರ ಇಚ್ಛೆಯಂತೆ ಸರಳವಾಗಿ ಅಂತ್ಯಕ್ರಿಯೆ ನಡೆದಿದ್ದು ಸುತ್ತೂರು ಶ್ರೀ, ಕನ್ಹೇರಿ ಶ್ರೀ ಬಸವಲಿಂಗ ಶ್ರೀಗಳವರಿಂದ ಸಿದ್ದೇಶ್ವರ ಸ್ವಾಮೀಜಿಗಳ ಚಿತೆಗೆ ಅಗ್ನಿಸ್ಪರ್ಶವಾಯಿತು.

ಆಶ್ರಮ ಆವರಣದಲ್ಲಿ ಸಿದ್ಧಪಡಿಸಿದ ವೇದಿಕೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ಹಲವು ಮಠಾಧೀಶರ ನೇತೃತ್ವದಲ್ಲಿ ಅಂತಿಮ ವಿಧಿವಿಧಾನಗಳು ನಡೆದವು.

ದಾರ್ಶನಿಕರ ಅಪೇಕ್ಷೆಯಂತೆ ವಿಧಿವಿಧಾನಗಳನ್ನು ಸರಳವಾಗಿ ಇರಿಸಲಾಯಿತು. ಸುತ್ತೂರು ಕನ್ಹೇರಿ ಬಸವಲಿಂಗ ಶ್ರೀಗಳು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಹಲವಾರು ಮಠಾಧೀಶರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿವಿಧ ಕೇಂದ್ರ ಸಚಿವರು ಹಾಗೂ ಕರ್ನಾಟಕ ರಾಜ್ಯದ ಸಚಿವರು, ಶಾಸಕರು ಹಾಗೂ ಅಪಾರ ಸಂಖ್ಯೆಯ ಭಕ್ತರು ಅಗಲಿದ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular