Thursday, November 6, 2025
Flats for sale
Homeರಾಜಕೀಯಬೆಂಗಳೂರು ; ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ; ಬಿಎಸ್ ಯಡಿಯೂರಪ್ಪ .

ಬೆಂಗಳೂರು ; ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ; ಬಿಎಸ್ ಯಡಿಯೂರಪ್ಪ .

ಬೆಂಗಳೂರು ; ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಸ್ಪಷ್ಟಪಡಿಸಿದ್ದಾರೆ.

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಈಗ 80 ವರ್ಷ ವಯಸ್ಸಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಪಕ್ಷವನ್ನು ಬಲಪಡಿಸಲು ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನನ್ನ ಮಕ್ಕಳಾದ ರಾಘವೇಂದ್ರ ಮತ್ತು ವಿಜಯೇಂದ್ರ ಇಬ್ಬರೂ ಪಕ್ಷವನ್ನು ಬಲಪಡಿಸಲು ರಾಜ್ಯದ ಉದ್ದಗಲಕ್ಕೂ ಸಂಚರಿಸುತ್ತಿದ್ದಾರೆ. ನಾನು ರಾಜಕೀಯದಿಂದ ನಿವೃತ್ತಿ ಪಡೆದಿಲ್ಲ. ದೇವರು ನನಗೆ ಶಕ್ತಿ ನೀಡಿದರೆ ಮುಂದಿನ ಚುನಾವಣೆವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಯಡಿಯೂರಪ್ಪ ಹೇಳಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯಡಿಯೂರಪ್ಪ, ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ.

“ನಾವು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆ. ಎರಡು ಸುತ್ತಿನ ಸಮೀಕ್ಷೆಯ ನಂತರ ಟಿಕೆಟ್ ನೀಡಲಾಗುವುದು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನಗಳನ್ನು ಗೆಲ್ಲುತ್ತದೆ” ಎಂದು ಯಡಿಯೂರಪ್ಪ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular