ಕಾರ್ಕಳ ; ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದ ತುಂಗಾ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ (36) ಎಂದು ಗುರುತಿಸಲಾಗಿದೆ. ಪುನೀತ್ ಮತ್ತು ಬಾಲಾಜಿ ವಾರಾಂತ್ಯದ ವಿಹಾರಕ್ಕೆಂದು ತೀರ್ಥಮತ್ತೂರು ಗ್ರಾಮಕ್ಕೆ ಆಗಮಿಸಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಬಳಿಯ ಹೋಂಸ್ಟೇಯಲ್ಲಿ ತಂಗಿದ್ದ ಅವರು ತುಂಗಾ ನದಿಗೆ ಈಜಲು ತೆರಳಲು ನಿರ್ಧರಿಸಿದ್ದರು. ದುರದೃಷ್ಟವಶಾತ್, ಅವರು ಬಲವಾದ ನೀರಿನ ಪ್ರವಾಹಕ್ಕೆ ಸಿಲುಕಿಕೊಂಡರು ಮತ್ತು ಮುಳುಗಿದರು. ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.


