ಚಿಕ್ಕಮಗಳೂರು : ಕಾಫಿನಾಡಲ್ಲಿ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಡೆದಿದೆ.ಚಾಕುವಿನಿಂದ ಕೈ ಹಾಗೂ ಹೊಟ್ಟೆ ಭಾಗಕ್ಕೆ ಹಲ್ಲೆಯಾಗಿದ್ದು ಅದೃಷ್ಟವಶಾತ್ ಅಪಾಯದಿಂದ ವೈದ್ಯರು ಪಾರಾಗಿದ್ದಾರೆ .
ತೋಟದ ಕಾರ್ಮಿಕರ ಮೇಲೆ ಹಲ್ಲೆ ಪಕ್ಕದ ತೋಟದ ಕಾರ್ಮಿಕರಿಂದ ಹಲ್ಲೆನಡೆಸಿದ್ದನು ,ಕೂಡಲೇ ಚಿಕಿತ್ಸೆಗೆಂದು ಸ್ಥಳಕ್ಕೆ ಹೋದ ವೈದ್ಯ ಗಣೇಶ್ ಮೇಲೂ ಕಾರ್ಮಿಕನ ಮೇಲೆ ಹಲ್ಲೆಗೈದ ಕಾರ್ಮಿಕರಿಂದ ಹಲ್ಲೆ ನಡೆದಿದೆ.ತೀವ್ರ ಅಸ್ವಸ್ಥರಾಗಿದ್ದ ವೈದ್ಯ ಗಣೇಶ್ ರವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ವರದಿಯಾಗಿದೆ,ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ವೈದ್ಯರ ಆರೋಗ್ಯ ವಿಚಾರಿಸದ್ದಾರೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


