ಚಿಕ್ಕೋಡಿ : ಮಹಾರಾಷ್ಟ್ರದ ಸಾಂಗೋಲಾ – ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಮೃತಪಟ್ಟ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ದುರ್ದೈವಿಗಳು.
ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಸಂದರ್ಭದಲ್ಲಿ ಕ್ರೂಸರ ವಾಹನದ ಎಡಬದಿಯ ಟೈರ್ ಬ್ಲ್ಯಾಸ್ಟ್ ಆಗಿ ಈ ದುರ್ಘಟನೆ ನಡೆದಿದೆ.ಬಳ್ಳಿಗೇರಿ ಗ್ರಾಮದಲ್ಲಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಕೆಎ 24 ಎಮ್1121 ಸಂಖ್ಯೆಯ ವಾಹನ ಟೈರ್ ಬ್ಲ್ಯಾಸ್ಟ್ ಪರಿಣಾಮ ಪಲ್ಟಿಯಾಗಿದೆ ಪರಿಣಾಮ ಮೂವರು ಸಾವನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು,ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.


